CrimeNational

ಮೈಸೂರಿನಿಂದ ಹೊರಟಿದ್ದ ರೈಲು ಅಪಘಾತ; ಹೊತ್ತಿ ಉರಿದ ಬೋಗಿಗಳು!

ಚೆನ್ನೈ; ಕಳೆದ ರಾತ್ರಿ ತಮಿಳುನಾಡಿನಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಪ್ಯಾಸೆಂಜರ್ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಪ್ಯಾಸೆಂಜರ್ ರೈಲಿನ ಹಾಲು ಬೋಗಿಗಳು ಹೊತ್ತಿ ಉರಿದಿವೆ.

 ಮೈಸೂರಿನಿಂದ ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ಮಾರ್ಗವಾಗಿ ದರ್ಬಾಂಗ್‌ಗೆ ತೆರಳುತ್ತಿದ್ದ ಭಾಗಮತಿ ಎಕ್ಸ್‌ಪ್ರೆಸ್ (12578) ರೈಲು ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಕವರೈಪೆಟ್ಟೈ ರೈಲು ನಿಲ್ದಾಣದ ಬಳಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ರೈಲು ಬೋಗಿಗಳಿಗೆ ಬೆಂಕಿ ಬಿದ್ದಿದೆ.. ಸುಮಾರು 13 ಬೋಗಿಗಳು ಹಳಿತಪ್ಪಿದವು.

  ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ದಕ್ಷಿಣ ರೈಲ್ವೆ ತಿಳಿಸಿದೆ. 044 2535 4151, 044 2435 4995 ಫೋನ್ ಸಂಖ್ಯೆಗಳೊಂದಿಗೆ ಸಹಾಯವಾಣಿಗಳನ್ನು ಸ್ಥಾಪಿಸಲಾಗಿದೆ ಎಂದು ಚೆನ್ನೈ ರೈಲ್ವೆ ವಿಭಾಗ ತಿಳಿಸಿದೆ. ಇವುಗಳೊಂದಿಗೆ ಆಂಧ್ರಪ್ರದೇಶದ ರೈಲ್ವೆ ವಿಭಾಗಗಳು ತುರ್ತು ಸಹಾಯವಾಣಿ ಸಂಖ್ಯೆಗಳನ್ನು ಸಹ ಬಿಡುಗಡೆ ಮಾಡಿದೆ. ಗುಡೂರು 08624 250795, ಓಂಗೋಲು 08592 280306, ವಿಜಯವಾಡ 0866 2571244, ನೆಲ್ಲೂರು 0861 2345863.. ಸಹಾಯವಾಣಿ ಸಂಖ್ಯೆಗಳನ್ನು ವ್ಯವಸ್ಥೆ ಮಾಡಲಾಗಿದೆ. ಗಾಯಗೊಂಡ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಸಮೀಪದ ಹಲವು ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಉಳಿದ ಪ್ರಯಾಣಿಕರು ಅವರವರ ಸ್ಥಳಗಳಿಗೆ ತಲುಪಲು ಪರ್ಯಾಯ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

Share Post