BengaluruCrime

ಕೈಕೊಟ್ಟ ಪ್ರೇಯಸಿಯ ಖಾಸಗಿ ಫೋಟೋ ಹಂಚಿಕೊಂಡ ವಿಕೃತ ಪ್ರೇಮಿ!

ಬೆಂಗಳೂರು; ಪ್ರೀತಿಸಿದಷ್ಟು ದಿನ ಪ್ರೀತಿಸಿ ನಂತರ ಕೈಕೊಟ್ಟಿದ್ದಾಳೆಂದು ಪ್ರೇಯಸಿಯ ಖಾಸಗಿ ಫೋಟೋವನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಿ ಪ್ರೇಮಿಯೊಬ್ಬ ವಿಕೃತಿ ಮೆರೆದಿದ್ದಾನೆ.. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಬಳಿಯ ಮಂಜುನಾಥ ನಗರದಲ್ಲಿ ಈ ಘಟನೆ ನಡೆದಿದೆ.. ಈ ಬಗ್ಗೆ ಯುವತಿ ದೂರು ನೀಡಿದ್ದು, ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ..
ಪ್ರೇಯಸಿ ಮದುವೆಯಾಗಲು ಒಪ್ಪಲಿಲ್ಲ ಎಂಬ ಕಾರಣಕ್ಕೆ ಆಕೆಯ ಖಾಸಗಿ ಫೋಟೋಗಳನ್ನು ದರ್ಶನ್‌ ಎಂಬಾತ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದ.. ಈ ಬಗ್ಗೆ ಬಾಗಲಗುಂಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.. ಯುವತಿ ಫರ್ನಿಚರ್‌ ಅಂಗಡಿಯೊಂದರಲ್ಲಿ ಸೇಲ್ಸ್‌ ಗರ್ಲ್‌ ಆಗಿ ಕೆಲಸ ಮಾಡುತ್ತಿದ್ದು, ನೀನು ನನ್ನ ಪ್ರೀತಿ ಮಾಡಲಿಲ್ಲ ಅಂದ್ರೆ ನಿನ್ನ ಜೀವನ ಹಾಳು ಮಾಡುತ್ತೇನೆ ಎಂದು ದರ್ಶನ್‌ ಎಂಬಾತ ಬೆದರಿಕೆ ಹಾಕಿದ್ದ ಎನ್ನಲಾಗಿದೆ.. ಜೊತೆಗೆ ಸೋಷಿಯಲ್‌ ಮೀಡಿಯಾದಲ್ಲಿ ಖಾಸಗಿ ಫೋಟೋಗಳನ್ನು ಹಾಕಿ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ..

Share Post