BengaluruCrime

ಪ್ರಾಂಶುಪಾಲರ ಕಿರುಕುಳ ಆರೋಪ; ಪ್ರಾಧ್ಯಾಪಕಿ ಆತ್ಮಹತ್ಯೆ ಯತ್ನ!

ಬೆಂಗಳೂರು; ಕಾಲೇಜು ಪ್ರಾಂಶುಪಾಲರು ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು ಸಹಾಯಕ ಪ್ರಾಧ್ಯಾಪಕಿಯೊಬ್ಬರು ಕಾಲೇಜಿನಲ್ಲಿಯೇ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.. ಬೆಂಗಳೂರಿನ ಎಸ್‌ಎಸ್‌ಎಂಆರ್‌ವಿ ಪದವಿ ಕಾಲೇಜಿನಲ್ಲಿ ನಡೆದಿದೆ.. ಸಹಾಯಕ ಪ್ರಾಧ್ಯಾಪಕಿ ಶಬಾನಾ ಎಂಬುವವರೇ ಆತ್ಮಹತ್ಯೆಗೆ ಯತ್ನಿಸಿದವರು.. ಪ್ರಾಂಶುಪಾಲರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದಾಗಿ ಆಕೆ ಹೇಳಿಕೊಂಡಿದ್ದಾರೆ..
ಇದಕ್ಕೂ ಮೊದಲು ಪ್ರಾಧ್ಯಾಪಕಿ ಪ್ರಾಂಶುಪಾಲರ ಕೊಠಡಿಗೆ ಹೋಗಿ ಹೊರಬಂದಿದ್ದರು.. ನಂತೆ ಸ್ಟಾಫ್‌ ರೂಮಿಗೆ ತೆರಳಿ ನಿದ್ದೆ ಮಾತ್ರೆ ಸೇವಿಸಿದ್ದಾರೆ ಎಂದು ತಿಳಿದುಬಂದಿದೆ.. ಸ್ಟಾಫ್ ರೂಮಿನಲ್ಲಿ ನಿದ್ದೆ ಮಾತ್ರೆಗಳನ್ನು ನುಂಗಿ ಅಸ್ತವ್ಯಸ್ತವಾಗಿ ಬಿದ್ದಿದ್ದರು.. ಇದನ್ನು ನೋಡಿದ ಇತರೆ ಸಿಬ್ಬಂದಿ, ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.. ಆಸ್ಪತ್ರೆ ಸಿಬ್ಬಂದಿ ಘಟನೆ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ತಿಲಕ್‌ ನಗರ ಪೊಲೀಸ್‌ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ.. ಆರೋಪದ ಬಗ್ಗೆ ತನಿಖೆ ನಡೆಸಲಾಗುತ್ತಿದೆ..

Share Post