CrimeDistricts

ಹುಬ್ಬಳ್ಳಿ ಬಳಿ ಭೀಕರ ಅಪಘಾತ; ಇಬ್ಬರು ದುರ್ಮರಣ!

ಹುಬ್ಬಳ್ಳಿ; ಹುಬ್ಬಳ್ಳಿ ಬಳಿ ಭೀಕರ ಅಪಘಾತ ನಡೆದಿದ್ದು, ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ.. ಬೈಕ್‌ಗೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.. ಗೋಕುಲ ಗ್ರಾಮದ ಬೈಪಾಸ್‌ನ ಧಾರಾವತಿ ಹನುಮಂತ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ..
ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ದ್ವಿಚಕ್ರ ವಾಹನ ಬಹುತೇಕ ಛಿದ್ರವಾಗಿದೆ.. ಸ್ಕೂಟರ್‌ ಮೇಲೆ ಸವಾರಿ ಮಾಡುತ್ತಿದ್ದ ಇಬ್ಬರು ಸವಾರರ ದೇಹ ಕೂಡಾ ಗುರುತು ಸಿಗದ ರೀತಿಯಲ್ಲಿ ಛಿದ್ರವಾಗಿವೆ.. ಮೃತರ ವಿವರಗಳು ಇನ್ನೂ ಲಭ್ಯವಾಗಿಲ್ಲ.. ಪೊಲೀಸರು ಅವರ ಗುರುತು ಪತ್ತೆ ಹಚ್ಚಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ಪೂನಾ-ಬೆಂಗಳೂರು ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ವಾಹನ ನಿಲ್ಲಿಸದೇ ಪರಾರಿಯಾಗಿದೆ.. ಹೆದ್ದಾರಿ ಅಗಲೀಕರಣ ಕಾಮಗಾರಿಗೆ ಚಾಲನೆ ನೀಡಿ ಮೂರು ವರ್ಷಗಳೇ ಕಳೆದಿವೆ.. ಆದ್ರೆ ಕಾಮಗಾರಿ ಪೂರ್ತಿಯಾಗುತ್ತಿಲ್ಲ.. ಈ ಕಾರಣದಿಂದಾಗಿ ಈ ಭಾಗದಲ್ಲಿ ಅಪಘಾತಗಳು ಹೆಚ್ಚಾಗುತ್ತಿವೆ ಎಂದು ಸಾರ್ವಜನಿಕರು ಆರೋಪ ಮಾಡುತ್ತಿದ್ದಾರೆ..

Share Post