BengaluruPolitics

ಚನ್ನಪಟ್ಟಣಕ್ಕೆ ಡಿಕೆ ಸುರೇಶ್ ಕಾಂಗ್ರೆಸ್ ಅಭ್ಯರ್ಥಿ?

 

ಬೆಂಗಳೂರು;  ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ. ಚನ್ನಪಟ್ಟಣಕ್ಕೆ ಅಭ್ಯರ್ಥಿ ಯಾರಾಗ್ತಾರೆ ಅನ್ನೋದು ಕುತೂಹಲ ಕೆರಳಿಸಿದೆ..

  ಕಾಂಗ್ರೆಸ್ ಪಕ್ಷದಿಂದ ಡಿಕೆ ಸಹೋದರ ಸುರೇಶ್ ಅಭ್ಯರ್ಥಿ ಆಗ್ತಾರೆ ಎಂದು ಹೇಳಲಾಗ್ತಿದೆ..  ಡಿ.ಕೆ.ಸುರೇಶ್ ಅವರೇ ಚನ್ನಪಟ್ಟಣದ ಕಾಂಗ್ರೆಸ್ ಅಭ್ಯರ್ಥಿ ಆಗ್ತಾರೆ ಎಂದು ಮಾಜಿ ಶಾಸಕ ಎಂ.ಸಿ.ಅಶ್ವಥ್ ಮಾಹಿತಿ ನೀಡಿದ್ದಾರೆ. ಅಲ್ಲದೇ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಮಾಜಿ ಶಾಸಕ ಅಶ್ವಥ್ ದೇವರ ಮೊರೆ ಹೋಗಿದ್ದಾರೆ. ನಾಳೆ ಹುಣ್ಣಿಮೆ ಪ್ರಯುಕ್ತ ಡಿ.ಕೆ.ಸುರೇಶ್ ಹೆಸರಿನಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಚಂಡಿಕಾ ಯಾಗ ನೆರವೇರಿಸಲಾಗುತ್ತದೆ ಎಂದಿದ್ದಾರೆ.

  ರಾಜ್ಯದಲ್ಲಿ ಚುನಾವಣೆ ನಡೆಯುತ್ತಿರುವ 3 ಕ್ಷೇತ್ರಗಳ ಪೈಕಿ

ಚನ್ನಪಟ್ಟಣ ಪ್ರತಿಷ್ಠೆಯ ಕ್ಷೇತ್ರವಾಗಿದೆ. ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಯನ್ನು ಅಭ್ಯರ್ಥಿ ಮಾಡ್ಬೇಕು ಎಂದು ಕುಮಾರಸ್ವಾಮಿ ಹೋರಾಡ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ತಮ್ಮ ಡಿಕೆ.ಸುರೇಶ್‌‌ಗಾದ ಸೋಲಿನ ಸೇಡು ತೀರಿಸಿಕೊಳ್ಳಲು ಡಿಕೆಶಿವಕುಮಾರ್‌ ಹಠಕ್ಕೆ ಬಿದ್ದಿದ್ದಾರೆ. ಹೀಗಾಗಿ ಈ ಕ್ಷೇತ್ರ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

Share Post