BengaluruHealth

ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ; ಕಾಮಾಕ್ಷಿಪಾಳ್ಯ ಠಾಣೆ ಎಎಸ್‌ಐ ನಿಧನ!

ಬೆಂಗಳೂರು; ಕರ್ತವ್ಯದಲ್ಲಿದ್ದ ಎಎಸ್‌ಐ ಒಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.. ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಈ ಘಟನೆ ನಡೆದಿದೆ.. ಕಾಮಾಕ್ಷಿಪಾಳ್ಯ ಠಾಣೆಯ ಎಎಸ್‌ಐ ಶಿವಶಂಕರಚಾರಿ ಎಂಬುವವರೇ ಸಾವನ್ನಪ್ಪಿದವರು..
ಎಎಸ್‌ಐ ಶಿವಶಂಕರಚಾರಿ ಅವರು ನಿನ್ನೆ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದರು.. ರೌಂಡ್ಸ್‌ಗೆ ಹೋಗುವ ಸಂದರ್ಭದಲ್ಲಿ ಉಸಿರಾಟದ ತೊಂದರೆ ಅನುಭವಿಸಿದ್ದಾರೆ.. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.. ಆದ್ರೆ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ..
ಶಿವಶಂಕರಚಾರಿ ಅವರು 1999ರಲ್ಲಿ ಪೊಲೀಸ್‌ ಇಲಾಖೆಗೆ ಸೇರಿದ್ದರು.. ಒಂದೂವರೆ ವರ್ಷದಿಂದ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಯಲ್ಲಿ ಎಎಸ್‌ಐ ಆಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.. ಆರಾಮಾಗಿಯೇ ಇದ್ದ ಅವರಿಗೆ ಇದ್ದಕ್ಕಿದ್ದಂತೆ ಸಮಸ್ಯೆ ಆಗಿ ಈ ರೀತಿ ಆಗಿದೆ ಎಂದು ತಿಳಿದುಬಂದಿದೆ..

 

Share Post