Uncategorized

ಸಿ.ಪಿ.ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆ!; ಕೈ ಟಿಕೆಟ್‌ ಫಿಕ್ಸ್‌

ಬೆಂಗಳೂರು; ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಅವರು ಬಿಜೆಪಿ ತೊರೆದು ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಯೋಗೇಶ್ವರ್‌ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.. ಚನ್ನಪಟ್ಟಣ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಆಯ್ಕೆಯಾಗೋದು ಕೂಡಾ ಪಕ್ಕಾ ಆಗಿದೆ..

ಕಳೆದ ರಾತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಯೋಗೇಶ್ವರ್‌ ಮಾತುಕತೆ ನಡೆಸಿದ್ದರು.. ಖಾಸಗಿ ಹೋಟೆಲ್‌ನಲ್ಲಿ ಚರ್ಚೆ ನಡೆಸಿದ್ದರು.. ಅನಂತರ ಇಂದು ಬೆಳಗ್ಗೆ ಡಿ.ಕೆ.ಶಿವಕುಮಾರ್‌ ಮನೆಗೆ ಭೇಟಿ ನೀಡಿದ್ದ ಸಿ.ಪಿ.ಯೋಗೇಶ್ವರ್‌ ಅವರು ಚರ್ಚೆ ಮಾಡಿದರು.. ಅನಂತರ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಅವರ ಆಶೀರ್ವಾದ ಪಡೆದರು..

ಇದೀಗ ಕೆಪಿಸಿಸಿ ಕಚೇರಿಗೆ ಆಗಮಿಸಿರುವ ಸಿ.ಪಿ.ಯೋಗೇಶ್ವರ್‌ ಅಧಿಕೃತವಾಗಿ ಕಾಂಗ್ರೆಸ್‌ ಸೇರುತ್ತಿದ್ದಾರೆ.. ಸಚಿವ ಜಮೀರ್‌ ಅಹ್ಮದ್‌ ಈ ಬಗ್ಗೆ ಮಾತನಾಡಿದ್ದು, ಚನ್ನಪಟ್ಟಣಕ್ಕೆ ಅವರೇ ಅಭ್ಯರ್ಥಿಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.. ಮಾಹಿತಿಗಳ ಪ್ರಕಾರ ಅವರೇ ಕಾಂಗ್ರೆಸ್‌ ಅಭ್ಯರ್ಥಿ ಎಂದು ತಿಳಿದುಬಂದಿದೆ..

Share Post