Districts

ವಜಾ ಆಗಿದ್ದ ಸಾರಿಗೆ ಸಿಬ್ಬಂದಿ ನೇಮಕಕ್ಕೆ ಆದೇಶ: ಸಚಿವ ಶ್ರೀರಾಮುಲು

 

ಗದಗ: ಕೊರೊನಾ ಸಮಯದಲ್ಲಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದೀರ್ಘ ಕಾಲದ ಮುಷ್ಕರ ನಡೆಸಿದ್ದ ಸಾರಿಗೆ ಸಿಬ್ಬಂದಿಯನ್ನು ವಜಾಗೊಳಿಸಲಾಗಿತ್ತು. ಈಗ ಮತ್ತೆ ಅವರೆಲ್ಲರನ್ನು ಕೆಲಸಕ್ಕೆ ತೆಗೆದುಕೊಳ್ಳುವಂತೆ ಸಾರಿಗೆ ಸಚಿವ ಶ್ರೀರಾಮುಲು ಆದೇಶಿಸಿದ್ದಾರೆ.

ಗದಗ್‌ನಲ್ಲಿ ಮಾತನಾಡಿದ ಅವರು ಸಾರಿಗೆ ನಮ್ಮ ರಾಜ್ಯದ ಶಕ್ತಿ ಅವರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ. ನಿಮ್ಮ ಬೇಡಿಕೆಗಳನ್ನು ಈಡೇರಿಸುತ್ತೇವೆ ಸಂಬಳದ ಅನುದಾನಗಳನ್ನು ನೀಡಲು ಸರ್ಕಾರ ಸಿದ್ಧವಿದೆ.

ಸಾರಿಗೆ ಸಿಬ್ಬಂದಿ ಎಂದಿಗೂ ಸರ್ಕಾರದ ಪರವಾಗಿ ಕೆಲಸ ಮಾಡಬೇಕು ಸರ್ಕಾರವನ್ನಿ ಇಕ್ಕಟ್ಟಿಗೆ ಸಿಲುಕಿಸುವ ಕೆಲಸವನ್ನು ಮಾಡಬಾರದು. ಈ ಕೂಡಲೇ ವಜಾ ಮಾಡಿರುವ ಎಲ್ಲಾ ಸಿಬ್ಬಂದಿಯನ್ನು ಯಾವುದೇ ಕಂಡೀಷನ್‌ ಇಲ್ಲದೆ ಮರುನೇಮಕ ಮಾಡಿಕೊಳ್ಳುವಂತೆ ನಾಲ್ಕು ವಿಭಾಗದ ಎಂಡಿಗಳಿಗೆ ಸೂಚನೆ ನೀಡಿದ್ರು.

Share Post