National

ದ್ವಿಚಕ್ರವಾಹನಗಳಿಗೆ ಪೆಟ್ರೋಲ್‌ ದರದಲ್ಲಿ 25ರೂ ಕಡಿತ

ರಾಂಚಿ : ದ್ವಿಚಕ್ರ ಸವಾರರಿಗೆ ಜಾರ್ಖಂಡ್‌ ಸರ್ಕಾರದಿಂದ ಖುಷಿಯ ವಿಷಯವೊಂದು ಹೊರಬಿದ್ದಿದೆ. ದ್ವಿಚಕ್ರವಾಹನಗಳಿಗೆ ಪೆಟ್ರೋಲ್‌ ದರದಲ್ಲಿ 25ರೂ ಕಡಿತ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಘೋಷಿಸಿದ್ದಾರೆ.

ಸರ್ಕಾರ ಸಹಾಯಧನ ನೀಡುವ ಮೂಲಕ ಈ ಒಂದು ಯೋಜನೆ ರೂಪಿಸಿದೆ. ಈ ದರ ಜನವರಿ ೨೬ರಿಂದ ಅನ್ವಯವಾಗಲಿದೆ.

ಟ್ವೀಟ್‌ನಲ್ಲಿ ಏನಿದೆ

ಜಾರ್ಖಂಡ್‌ ಮುಖ್ಯಮಂತ್ರಿ ಕಾರ್ಯಾಲಯ ಟ್ವೀಟ್‌ ಮಾಡಿದ್ದು, ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಬಡವರು, ಮಧ್ಯಮ ವರ್ಗದ ಜನರು ಹೆಚ್ಚು ತೊಂದರೆಗೊಳಗಾಗಿದ್ದಾರೆ ಹೀಗಾಗಿ ರಾಜ್ಯ ಸರ್ಕಾರವು ದ್ವಿಚಕ್ರವಾಹನಗಳಿಗೆ ಪ್ರತಿ ಲೀಟರ್‌ ಪೆಟ್ರೋಲ್‌ ದರದಲ್ಲಿ ೨೫ರೂ ಸಹಾಯ ಧನ ನೀಡಲು ನಿರ್ಧರಿಸಿದೆ. ೨೦೨೨ರ ಜನವರಿ ೨೬ರಿಂದ ಈ ಪ್ರಯೋಜನ ಪಡೆಯಲಿದೆ ಎಂದು ಹೇಳಿದ್ದಾರೆ.

Share Post