Districts

ಜಾತಿ ರಾಜಕಾರಣ ಆರೋಪ; ಗಳಗಳನೆ ಅತ್ತ ಸಚಿವ ಮಾಧುಸ್ವಾಮಿ..!

ತುಮಕೂರು: ನೀರಾವರಿ ವಿಷಯದಲ್ಲಿ ಸಚಿವರು ಜಾರಿ ರಾಜಕಾರಣ ಮಾಡುತ್ತಿದ್ದಾರೆಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಚಿವ ಮಾಧುಸ್ವಾಮಿಯವರು ವೇದಿಕೆಯಲ್ಲೇ ಕಣ್ಣೀರಿಟ್ಟ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ. ನಾನು ನೀರಾವರಿ ವಿಷಯದಲ್ಲಿ ಜಾತ ರಾಜಕಾರಣ ಮಾಡಿಲ್ಲ. ಅಂತಹ ಕೀಳು ಮಟ್ಟದ ರಾಜಕಾರಣಿ ನಾನಲ್ಲ ಎಂದು ಸಚಿವ ಮಾಧುಸ್ವಾಮಿ ಇದೇ ವೇಳೆ ಹೇಳಿದ್ದಾರೆ.

    ಹುಳಿಯಾರಿನಲ್ಲಿ ನೀರಾವರಿ ಯೋಜನೆಗಳ ಅನುಷ್ಠಾನ ಸಂಬಂಧ ಸಸಭೆ ನಡೆಯಿತು. ಈ ಸಭೆಯಲ್ಲಿ ಮಾತನಾಡಿದ ಅವರು,  ಲಿಂಗಾಯತರಿಗೆ ಮಾತ್ರ ಮಾಧುಸ್ವಾಮಿ ಸೀಮಿತವಾಗಿದ್ದಾರೆ ಎಂದು ಕೆಲವರು ಹೇಳುತ್ತಿದ್ದರು. ಆದರೆ ಈಗ ನನ್ನ ಕೆಲಸ ನೋಡಿ ಅವರು ಅದೇ ಮಾತು ಹೇಳಲಿ ನೋಡೋಣ ಎಂದು ಪ್ರಶ್ನಿಸಿದರು.  ತಿಮ್ಲಾಪುರ ಕೆರೆಯ ಅಚ್ಚುಕಟ್ಟು ಪ್ರದೇಶದಲ್ಲಿ ಮಾತ್ರ ಹಿಂದುಳಿದವರ ಜಮೀನಿದೆ. ಉಳಿದೆಡೆ ಮೇಲ್ವರ್ಗದವರ ಜಮೀನಿದೆ. ಹಾಗಾಗಿ, ಹಿಂದುಳಿದವರಿಗೆ ನೆರವಾಗಲು ತಿಮ್ಲಾಪುರ ಕೆರೆಗೆ ಹೇಮಾವತಿ ನೀರು ಹರಿಸಲು ಹಠ ಮಾಡಿದ್ದೆ ಎಂದೂ ಸಚಿವ ಮಾಧುಸ್ವಾಮಿ ಹೇಳಿದ್ದಾರೆ.

Share Post