National

ವೈಷ್ಣೋ ದೇವಿ ಮಂದಿರದಲ್ಲಿ ಕಾಲ್ತುಳಿತ : 12 ಜನರು ಸಾವು

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ಮಾತಾ ವೈಷ್ಣೋ ದೇವಿ ಮಂದಿರದಲ್ಲಿ ಉಂಟಾದ ನೂಕು ನುಗ್ಗಲಿನ ಕಾರಣ ಕಾಲ್ತುಳಿತಕ್ಕೆ ಸಿಕ್ಕಿ ಕನಿಷ್ಠ ೧೨ ಮಂದಿ ಮೃತಪಟ್ಟಿದ್ದಾರೆ ಮತ್ತು ೧೩ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

ತ್ರಿಕೂಟ ಬೆಟ್ಟಗಳ ಮೇಲಿರುವ ದೇಗುಲದ ಗರ್ಭಗುಡಿಯ ಹೊರಗೆ ಮುಂಜಾನೆ ೨.೪೫ರ ಸುಮಾರಿಗೆ ಕಾಲ್ತುಳಿತ ಸಂಭವಿಸಿದೆ.  ಯಾತ್ರಾರ್ಥಿಗಳ ನಡುವೆ ವಾಗ್ವಾದ ನಡೆದು ಒಬ್ಬರನ್ನೊಬ್ಬರು ತಳ್ಳಾಡಿಕೊಂಡ ಕಾರಣ ಈ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ.

ಹೊಸ ವರ್ಷದ ಪ್ರಯುಕ್ತ ಜನರು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದ್ದ ಕಾರಣ ಈ ಅವಘಡ ಸಂಭವಿಸಿದೆ.

Share Post