National

ಭದ್ರತಾಲೋಪ ವಿಚಾರ: ರಾಷ್ಟ್ರಪತಿ ಕೋವಿಂದ್‌ ಭೇಟಿಯಾದ ಪ್ರಧಾನಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ರಾಷ್ಟ್ರಪತಿ ಭವನಕ್ಕೆ ಭೇಟಿ  ನೀಡಿದ್ದರು. ರಾಷ್ಟ್ರಪತಿ ರಮಾನಾಥ್‌ ಕೋವಿಂದ್‌ ಅವರನ್ನು ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ, ಕೆಲ ಹೊತ್ತು ಮಾತುಕತೆ ನಡೆಸಿದರು. ನಿನ್ನೆ ಪಂಜಾಬ್‌ನಲ್ಲಿ ಆದ ಘಟನೆ ಬಗ್ಗೆ ರಾಷ್ಟ್ರಪತಿಗಳಿಗೆ ಪ್ರಧಾನಿ ನರೇಂದ್ರ ಮೋದಿ ವಿವರಿಸಿದರು.

ಪಂಜಾಬ್‌ನಲ್ಲಿ ಭದ್ರತಾ ವೈಫಲ್ಯವಾದ ಬಗ್ಗೆ ರಾಷ್ಟ್ರಪತಿ ರಮಾನಾಥ್‌ ಕೋವಿಂದ್‌ ಅವರು ಕಳವಳ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಪಂಜಾಬ್‌ ಭೇಟಿ ವೇಳೆ ನಡೆದ ಘಟನೆಗಳನ್ನು ರಾಷ್ಟ್ರಪತಿಗಳಿಗೆ ಪ್ರಧಾನಿ ಮೋದಿ ವಿವರಿಸಿದರು.

Share Post