Districts

ಜನರಿಲ್ಲದೆ ಬಿಕೋ ಎನ್ನುತ್ತಿರುವ ಮುಳ್ಳಯ್ಯನಗಿರಿ ಬೆಟ್ಟ

ಚಿಕ್ಕಮಗಳೂರು : ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಸ್ತಬ್ದವಾಗಿದೆ. ನಗರದ ಕೆ.ಎಸ್‌ ಆರ್‌ ಟಿಸಿ ಬಸ್‌ ನಿಲ್ದಾಣ ಜನರಿಲ್ಲದೆ ಬಿಕೋ ಎನ್ನುತ್ತಿದೆ.
ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಟ್ರೂ ಸಹ ಪ್ರಯಾಣಿಕರ ಸಂಖ್ಯೆ ಕಡಿಮೆ ಇದೆ.ಜಿಲ್ಲಾದ್ಯಂತ ಅಂಗಡಿ ಮುಂಗಟ್ಟುಗಳು ಬಂದ್‌ ಆಗಿವೆ. ನಗರಲ್ಲಿ ಮೆಡಿಕಲ್‌ ಹಾಗೂ ಅಗತ್ಯ ಸೇವೆ ಹೊರತುಪಡಿಸಿ ಉಳಿದ ಎಲ್ಲ ಮಳಿಗೆಗಳು ಬಂದ್‌ ಆಗಿವೆ.
ಇನ್ನು ಪ್ರವಾಸಿ ತಾಣಗಳು ಸಉ ನಿಶ್ಯಬ್ದವಾಗಿದೆ. ರಾಜ್ಯದ ಅತಿ ಎತ್ತರದ ಪ್ರದೇಶ ಮುಳ್ಳಯ್ಯನಗಿರಿ ಪ್ರವಾಸಿಗರಿಲ್ಲದೆ ಸಂಪೂರ್ಣ ಖಾಲಿ ಖಾಲಿ ಆಗಿದೆ. ಯಾವಾಗ್ಲು ವೀಕೆಂಡ್‌ ವೇಳೆಗೆ
ಮುಳ್ಳಯ್ಯನಗಿರಿಯಲ್ಲಿ ಜನಜಾತ್ರೆ ಏರ್ಪಡುತ್ತಿತ್ತು. ಇದೀಗ ಪ್ರವಾಸಿಗರಿಲ್ಲದೇ ಮುಳ್ಳಯ್ಯನಗಿರಿ ಬೆಟ್ಟ ಬಣಗುಡುತ್ತಿದೆ.
ಕಳೆದ ಶನಿವಾರ ಹೊಸ ವರ್ಷದ ದಿನ ಪ್ರಯುಕ್ತ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು. ಈ ಹಿನ್ನೆಲೆಯಲ್ಲಿ ಐದಾರು ಕಿಲೋ ಮೀಟರ್ ದೂರ ಟ್ರಾಫಿಕ್ ಜಾಮ್  ಕೂಡ ಉಂಟಾಗಿತ್ತು. ಆದರೆ ಈ ಬಾರಿ ವೀಕೆಂಡ್‌ ಗೆ ಜನರಿಲ್ಲದೆ ಬಿಕೋ ಎನ್ನುತ್ತಿದೆ

Share Post