Health

ಸಚಿವ ನಾರಾಯಣ ಗೌಡಗೆ ಕೊರೊನಾ ದೃಢ

ಬೆಂಗಳೂರು : ಕೋವಿಡ್‌ ಮೂರನೇ ಅಲೆ ಹಬ್ಬುತ್ತಿರುವ ವೇಗಕ್ಕೆ ಲಾಕ್‌ಡೌನ್‌ ಒಂದೇ ಅಸ್ತ್ರದಂತೆ ಕಾಣ್ತಿದೆ. ಈಗ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ನಾರಾಯಣ ಗೌಡ ಅವರಿಗೂ ಕೋವಿಡ್‌ ಸೋಂಕು ದೃಢವಾಗಿದೆ.

ನಾರಾಯಣ ಗೌಡ ಅವರು ತಮ್ಮ ಅಧಿಕೃತ ಟ್ವಿಟ್ಟರ್‌ನಲ್ಲಿ ಈ ಬಗ್ಗೆ ಪೋಸ್ಟ್‌ ಹಾಕಿದ್ದಾರೆ. ನನಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಮುಂಜಾಗ್ರತೆವಹಿಸಿ, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಈ ಮೂಲಕ ಮನವಿ ಮಾಡುತ್ತಿದ್ದೇನೆ. ಎಂದು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.

ಇತ್ತೀಚೆಗೆ ನಾರಾಯಣ ಗೌಡ ಹಲವಾರು ಕೋವಿಡ್‌ ಕೇಂದ್ರಗಳಿಗೆ ಭೇಟಿ ನೀಡಿದ್ದರು. ನಂತರ ಅವರಿಗೆ ಜ್ವರ ಬಾಧಿಸಿದೆ. ಪರೀಕ್ಷೆ ನಡೆಸಿದಾಗ ಪಾಸಿಟಿವ್‌ ಇರುವ ವಿಷಯ ಗೊತ್ತಾಗಿದೆ. ಸದ್ಯಕ್ಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Share Post