Districts

ಶಾಸಕ ಕೆ.ಜಿ.ಬೋಪಯ್ಯಗೆ ಬ್ಲ್ಯಾಕ್‌ಮೇಲ್‌ ಪ್ರಕರಣ; ರೌಡಿ ಶೀಟರ್‌ ಆನಂದ್‌ ಅರೆಸ್ಟ್‌

ಮಡಿಕೇರಿ: ಎಸಿಬಿ ಅಧಿಕಾರಿಗಳ ಸೋಗಿನಲ್ಲಿ ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯಗೆ ಒಂದು ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಪ್ರಕರಣ ಸಂಬಂಧ ರೌಡಿ ಶೀಟರ್‌ ಆನಂದ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಆನಂದ್‌ ತಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದ ನಿಔಆಸಿ ಎಂದು ತಿಳಿದುಬಂದಿದೆ.

ಜನವರಿ ಐದರಂದು ಶಾಸಕ ಕೆ.ಜಿ.ಬೋಪಯ್ಯ ಅವರಿಗೆ ಕರೆ ಮಾಡಿದ್ದ ಆರೋಪಿ ತಾನು ಎಸಿಬಿ ಅಧಿಕಾರಿ ಎಂದು ಹೇಳಿಕೊಂಡಿದ್ದ. ನಿಮ್ಮ ಮೇಲೆ ದಾಳಿ ಮಾಡುತ್ತಿದ್ದೇವೆ. ದಾಳಿ ಮಾಡುವುದು ಬೇಡ ಎನ್ನುವುದಾದರೆ ಒಂದು ಕೋಟಿ ರೂಪಾಯಿ ಕೊಡಬೇಕು ಎಂದು ಹೇಳಿದ್ದ. ರೌಡಿ ಶೀಟರ್‌ ಬೇಡಿಕೆಗೆ ಜಗ್ಗದ ಶಾಸಕ ಕೆ.ಜಿ.ಬೋಪಯ್ಯ ಅವರು ಪೊಲೀಸರಿಗೆ ನೀಡಿದ್ದರು.

ಪ್ರಕರಣದ ಬೆನ್ನುಹತ್ತಿದ ಪೊಲೀಸರಿಗೆ ಆರೋಪಿ ಆಂಧ್ರಪ್ರದೇಶಕ್ಕೆ ಹೋಗಿ ಅಲ್ಲಿಂದ ಕರೆ ಮಾಡಿದ್ದ ಎಂದು ಗೊತ್ತಾಗಿದೆ. ಆತನ ಮೊಬೈಲ್‌ ಟವರ್‌ ಆಧರಿಸಿ ತನಿಖೆ ನಡೆಸಿದಾಗ, ಆರೋಪಿ ರೈಲಿನಲ್ಲಿ ಬೆಂಗಳೂರಿಗೆ ಬರುತ್ತಿರುವುದು ಗೊತ್ತಾಗಿದೆ. ಆತನಿಗಾಗಿ ಕಾಯುತ್ತಿದ್ದ ಪೊಲೀಸರು ಬೆಂಗಳೂರಿಗೆ ಬರುತ್ತಿದ್ದಂತೆ ಬಂಧಿಸಿದ್ದಾರೆ.

Share Post