Health

ರಾಜ್ಯದಲ್ಲಿ ಲಾಕ್‌ಡೌನ್‌ ಮಾಡುವುದಿಲ್ಲ; ಸಚಿವ ಆರ್‌.ಅಶೋಕ್‌

ಬೆಂಗಳೂರು: ರಾಜ್ಯದಲ್ಲಿ ಕೊವಿಡ್‌ ನಿಯಂತ್ರಣಕ್ಕೆ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೂ ಪಾಸಿಟಿವ್‌ ಕೇಸ್‌ಗಳ ಸಂಖ್ಯೆ ಜಾಸ್ತಿಯಾಗುತ್ತಿದೆ. ಪ್ರಕರಣಗಳ ಸಂಖ್ಯೆ ಕಡಿಮೆಯಾದರೆ, ನಿಯಮಗಳ ಸಡಿಲಿಕೆ ಮಾಡಬಹುದು ಎಂದು ಸಚಿವ ಆರ್‌.ಅಶೋಕ್‌ ಹೇಳಿದ್ದಾರೆ.

     ವಿಧಾನಸೌಧದಲ್ಲಿ ಮಾತನಾಡಿದ ಅವರು, ಲಾಕ್‌ಡೌನ್‌ ಮಾಡುವ ಯಾವುದೇ ಚಿಂತನೆ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದರು. ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ. ಸಭೆಯಲ್ಲಿ ತಜ್ಞರು, ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಅವರಿಂದ ಸಲಹೆ ಸೂಚನೆಗಳನ್ನು ಪಡೆಯುತ್ತೇವೆ ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.

Share Post