BengaluruPolitics

ಸಿಎಂ ಜನತಾ ದರ್ಶನಕ್ಕೆ ಹರಿದುಬಂದ ಜನಸಾಗರ

ಬೆಂಗಳೂರು; ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಜನತಾ ದರ್ಶನ ಕಾರ್ಯಕ್ರಮ ನಡೆಸುತ್ತಿದ್ದಾರೆ. ಈ ವೇಳೆ ಅಹವಾಲು ಹೇಳಿಕೊಳ್ಳಲು ರಾಜ್ಯದ ವಿವಿಧ ಭಾಗಗಳಿಂದ ಭಾರಿ ಸಂಖ್ಯೆಯಲ್ಲಿ ಜನ ಆಗಮಿಸಿದ್ದಾರೆ.

 ಜನರ ಅಹವಾಲು ಸ್ವೀಕರಿಸಲು ಒಟ್ಟು 20 ಕೌಂಟರ್ ಸ್ಥಾಪಿಸಲಾಗಿದೆ. ವಿಶೇಷಚೇತನರು ಮತ್ತು ಹಿರಿಯ ನಾಗರಿಕರಿಗೆ ಎರಡು ಕೌಂಟರ್ ಗಳನ್ನು ಮೀಸಲಿರಿಸಲಾಗಿದೆ. ಸ್ವೀಕರಿಸಿದ ಅಹವಾಲುಗಳನ್ನು ಇಲಾಖಾವಾರು ವಿಂಗಡಿಸಿ ತಂತ್ರಾಂಶದಲ್ಲಿ ದಾಖಲಿಸಿ ಅರ್ಜಿದಾರರಿಗೆ ಸ್ವೀಕೃತಿ ಪತ್ರ ನೀಡಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಜನರ ಅಹವಾಲುಗಳನ್ನು ಆಲಿಸಿ ಪರಿಹಾರ ಸೂಚಿಸುತ್ತಿದ್ದಾರೆ. ಇದರಂತೆ ಕೌಂಟರ್ಗಳಲ್ಲಿ ಜನರು ಸರತಿ ಸಾಲಿನಲ್ಲಿ ನಿಂತ ಜನರು, ತಮ್ಮ ಅಹವಾಲುಗಳನ್ನು ಸಲ್ಲಿಸುತ್ತಿದ್ದಾರೆ.

Share Post