BengaluruPolitics

ಈ ಕ್ಷೇತ್ರ ಜೆಡಿಎಸ್ ಗೆ ಬಿಟ್ಟುಕೊಟ್ಟ ಬಿಜೆಪಿ

ಬೆಂಗಳೂರು; ಇಂದು ಬೆಳಗ್ಗೆ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿನ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ನಿವಾಸದಲ್ಲಿ ಬಿಜೆಪಿ ಹಾಗೂ ಜೆಡಿಎಸ್​ ನಾಯಕರು ಮೊದಲ ಮೈತ್ರಿ ಸಭೆ ಮಾಡಿದರು. ಈ ಸಭೆಯಲ್ಲಿ ಉಪ ಚುನಾವಣೆ ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್​ಗೆ ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ಸಭೆಯಲ್ಲಿ ನಿರ್ಧಾರವಾಗಿದ್ದು, ಈ ಬಗ್ಗೆ ಪಕ್ಷದ ವರಿಷ್ಠರ ಭೇಟಿ ನಂತರ ಅಂತಿಮ ಘೋಷಣೆಯಾಗಲಿದೆ.

 

ಕಳೆದ ಬಾರಿ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಆದ್ರೆ, ಇದೀಗ ಉಪಚುನಾವಣೆ ನಡೆಯುತ್ತಿರುವುದರಿಂದ ಈ ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಡಲು ತೀರ್ಮಾನಿಸಿದೆ. ಇದರೊಂದಿಗೆ ಮೊದಲ ಸಭೆಯಲ್ಲೇ ತಮ್ಮ ಮಿತ್ರ ಪಕ್ಷಕ್ಕೆ ಬಿಜೆಪಿ ನಾಯಕರು ಜೈ ಎಂದಿದ್ದು, ಅದನ್ನು ಹೈಕಮಾಂಡ್​ ಗಮನಕ್ಕೆ ತಂದು ಅಧಿಕೃತ ಘೋಷಣೆ ಮಾಡಲಿದ್ದಾರೆ.

Share Post