Bengaluru

ಕೆಆರ್ ಎಸ್ ಸುತ್ತಮುತ್ತ ಗಣಿಗಾರಿಕೆಗೆ ಹೈಕೋರ್ಟ್ ನಿರ್ಬಂಧ

ಬೆಂಗಳೂರು; ಮಂಡ್ಯ ಜಿಲ್ಲೆಯಲ್ಲಿರುವ ಕೃಷ್ಣರಾಜ ಸಾಗರ ಅಣೆಕಟ್ಟೆ ಸುತ್ತಮುತ್ತ ಗಣಿಗಾರಿಕೆಗೆ ನಿರ್ಬಂಧ ಹೇರಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಡ್ಯಾಂನ 20 ಕಿಲೋ ಮೀಟರ್ ಸುತ್ತಳತೆಯಲ್ಲಿ ಯಾವುದೇ ಗಣಿಗಾರಿಕೆ ನಡೆಸಬಾರದು ಎಂದು ಕೋರ್ಟ್ ಸೂಚಿಸಿದೆ.

 

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಪೀಠ ಈ ಆದೇಶ ನೀಡಿದೆ. ಕೆಆರ್ ಎಸ್ ಬಳಿ ಗಣಿಗಾರಿಕೆ ನಡೆಸಿದ್ದರಿಂದ ಹಲವು ಬಾರಿ ದೊಡ್ಡ ಶಬ್ದಗಳು ಕೇಳಿಬಂದಿದ್ದವು. ಇದರಿಂದ ಅಣೆಕಟ್ಟೆ ಮೇಲೆ ಪರಿಣಾಮ‌ ಬೀರಲಿದೆ. ಹೀಗಾಗಿ ಡ್ಯಾಮ್ ಸುತ್ತ ಗಣಿಗಾರಿಕೆ ನಡೆಸಬಾರದು ಎಂದು ಕೋರ್ಟ್ ಹೇಳಿದೆ.

 

Share Post