Bengaluru

ಚಂದ್ರು ಕೊಲೆ ಪ್ರಕರಣದ ಸಿಐಡಿ ತನಿಖೆಗೆ; ಸಿಎಂ ಬೊಮ್ಮಾಯಿ

ಬೆಂಗಳೂರು: ಗೋರಿಪಾಳ್ಯದಲ್ಲಿ ನಡೆದ ಚಂದ್ರು ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆ ವಹಿಸಿದೆ. ಈ ವಿಚಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಹೇಳಿದ್ದಾರೆ. 

ಈ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಚಂದ್ರು ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ಸೂಚಿಸಿದ್ದೇನೆ. ನಿನ್ನೆ ಡಿಜಿ, ಐಜಿಪಿ ಮತ್ತು‌ ಬೆಂಗಳೂರು ಪೊಲೀಸ್‌ ಆಯುಕ್ತರನ್ನು ಕರೆದು ಮಾತನಾಡಿದ್ದೇನೆ. ಇಂದು ನಗರ ಪೊಲೀಸ್ ಆಯುಕ್ತರು ಪ್ರಕರಣವನ್ನು ಸಿಐಡಿಗೆ ಹಸ್ತಾಂತರ ಮಾಡಲಿದ್ದಾರೆ ಎಂದರು.

ಏಪ್ರಿಲ್ 5ರಂದು ಗೋರಿಪಾಳ್ಯದಲ್ಲಿ ಮಧ್ಯರಾತ್ರಿ ಚಂದ್ರುನನ್ನು ಕೊಲೆ ಮಾಡಲಾಗಿತ್ತು. ಕ್ಷುಲ್ಲಕ ಕಾರಣಕ್ಕೆ ಚಂದ್ರು ಮೇಲೆ ಚಾಕುವಿನಿಂದ ದಾಳಿ ನಡೆಸಲಾಗಿತ್ತು. ಈಗಾಗಲೇ ಪ್ರಕರಣದ ಆರೋಪಿಗಳನ್ನು ಬಂಧಿಸಲಾಗಿದೆ.

Share Post