Bengaluru

ಜ.21ಕ್ಕೆ‌ ಡಾ. ಶಿವಕುಮಾರ ಸ್ವಾಮೀಜಿ ಪುಣ್ಯ ಸಂಸ್ಮರಣೋತ್ಸವ

ತುಮಕೂರು: ತ್ರಿವಿಧ ದಾಸೋಹಿ ನಡೆದಾಡುವ ದೇವರು ಲಿಂಗೈಕ್ಯ ಶ್ರೀ ಶಿವಕುಮಾರ ಮಹಾಸ್ವಾಮಿಜಿಯವರ ಪುಣ್ಯ ಸಂಸ್ಮರಣೋತ್ಸವ ಜ 21 ರಂದು ನಡೆಯಲಿದೆ.

2019 ಜ 21 ರಂದು ಲಿಂಗೈಕ್ಯರಾದ ತುಮಕೂರಿನ ಸಿದ್ದಗಂಗಾ ಮಠದ ನಡೆದಾಡುವ ದೇವರು ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಮಹಾಸ್ವಾಮಿಗಳ 4 ನೇ ಪುಣ್ಯ ಸಂಸ್ಮರಣೋತ್ಸವ ಮಠದ ಆವರಣದಲ್ಲಿ ನಡೆಯಲಿದೆ.
ಪ್ರತಿ ವರ್ಷದಂತೆ ಈ ವರ್ಷವೂ ಸಹ ಸಿದ್ದಗಂಗಾ ಮಠದಲ್ಲಿ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳು ನಡೆಯುತ್ತಿವೆ.

ಸಿದ್ದಗಂಗಾ ಮಠಾಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿಗಳ ನಢತೃತ್ವದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಿ ಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿ ಎಂ ಯಡಿಯೂರಪ್ಪ,ಗೃಹ ಸಚಿವ ಅರಗ ಜ್ಞಾನೇಂದ್ರ, ಸಚಿವ ವಿ ಸೋಮಣ್ಣ, ಬಿ ಸಿ ನಾಗೇಶ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಮಠದ ಆವರಣದಲ್ಲಿ ಶ್ರೀಗಳ ಗದ್ದುಗೆಯಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆಲಿವೆ. ಮಠಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಪ್ರಸಾದ ವ್ಯವಸ್ಥೆ ಏರ್ಪಡಿಸಲಾಗ್ತಿದೆ. ನಾಡಿನ ಮೂಲೆ ಮೂಲೆಯಿಂದ ಅಂದು ಭಕ್ತರು ಮಠಕ್ಕೆ ಆಗಮಿಸಿ ಶ್ರೀಗಳ ಗದ್ದುಗೆಗೆ ದರ್ಶನ ಪಡೆಯುವರು.

Share Post