BengaluruPolitics

ಡಿಕೆಶಿಯಿಂದ ಶಿವರಾಜ್ ಕುಮಾರ್ ಗೆ ಲೋಕಸಭಾ ಟಿಕೆಟ್ ಆಫರ್

ಬೆಂಗಳೂರು; ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ನಟ ಶಿವರಾಜ್ ಕುಮಾರ್  ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಹ್ವಾನ ನೀಡಿದ್ದರಂತೆ. ಈ ವಿಚಾರವನ್ನು ಶಿವರಾಜ್ ಕುಮಾರ್ ಅವರೇ ಹೇಳಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಈಡಿಗ ಸಮಾವೇಶದಲ್ಲಿ ಮಾತನಾಡಿರುವ ಶಿವಣ್ಣ, ಡಿ.ಕೆ.ಶಿವಕುಮಾರ್ ಅವರು ಆಫರ್ ನೀಡಿದ್ದರು. ಆದರೆ ರಾಜಕೀಯ ನನಗೆ ಗೊತ್ತಿಲ್ಲ. ಸಿನಿಮಾದಲ್ಲೇ ಮುಂದುವರೆಯುವೆ ಎಂದು ಶಿವಣ್ಣ ಹೇಳಿದ್ದಾರೆ.

 

 ಲೋಕಸಭೆ ರೆಡಿಯಾಗಿ ಎಂದು ಡಿಕೆಶಿ ಹೇಳಿದ್ದರು. ನಮ್ಮ ತಂದೆ ಕೊಟ್ಟಿರುವ ಬಳವಳಿ ಮುಂದುವರೆಸಿಕೊಂಡು ಹೋಗಬೇಕು. ಮೇಕಪ್ ಹಾಕುವುದು, ಸಿನಿಮಾ ಮಾಡುವುದು ಅಷ್ಟೇ ನಮ್ಮ ಕೆಲಸ ಎಂದು ಶಿವಣ್ಣ ಹೇಳಿದ್ದಾರೆ.

 

Share Post