BengaluruPolitics

ಬಸವಣ್ಣ ಕರ್ನಾಟಕದ ಸಾಂಸ್ಕೃತಿ ನಾಯಕ; ಘೋಷಣೆಗೆ ಸರ್ಕಾರ ತೀರ್ಮಾನ

ಬೆಂಗಳೂರು; ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಜಗಜ್ಯೋತಿ ಬಸವೇಶ್ವರರ ಚಿಂತನೆ ಅನುಭಾವ ಸಾರ್ವಕಾಲಿಕವಾಗಿದ್ದು, ಅವರನ್ನು ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಕರ್ನಾಟಕ ಸರ್ಕಾರ ಅಧಿಕೃತವಾಗಿ ಘೋಷಣೆ ಮಾಡಲಿದೆ.

 

ಇನ್ನು ಈ ಬಗ್ಗೆ ಸಚಿವ ಈಶ್ವರ್ ಖಂಡ್ರೆ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಪ್ರಜಾಪ್ರಭುತ್ವ ಪರಿಕಲ್ಪನೆಯನ್ನು ಜಗತ್ತಿಗೆ ನೀಡಿದ ಅಣ್ಣ ಬಸವಣ್ಣ ಅವರನ್ನು ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲು ಸಚಿವ ಸಂಪುಟ ಸಭೆಯು ತೀರ್ಮಾನಿಸಿದೆ. ಸಂಪುಟದಲ್ಲಿ ಯಾವುದೇ ಚರ್ಚೆಯಾಗದೇ ಎಲ್ಲರ ಸಮ್ಮತಿಯೊಂದಿಗೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಿದರು.

Share Post