BengaluruPolitics

ಬಿಜೆಪಿ ನಾಯಕರ‌ ಮನೆ ಮೇಲೆ ಯಾಕೆ ದಾಳಿ ಆಗ್ತಿಲ್ಲ..?; ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು; ಜಾರ್ಖಂಡ್‌ನ ಕಾಂಗ್ರೆಸ್‌ ಸಂಸದ ಧೀರಜ್‌ ಪ್ರಸಾದ್‌ ಸಾಹು ಅವರಿಗೆ ಸಂಬಂಧಿಸಿದ ಆಸ್ತಿಗಳ ಮೇಲೆ ದಾಳಿ ನಡೆಸಿದಾಗ 200 ಕೋಟಿಗೂ ಅಧಿಕ ಮೊತ್ತದ ನಗದು ಸಿಕ್ಕಿತ್ತು. ಈ ಸಂಬಂಧ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರ ಕೇವಲ ಕಾಂಗ್ರೆಸ್‌ನನ್ನೇ ಗುರಿಯಾಗಿಸಿಕೊಂಡಿದೆಯೇ ಹೊರತು ಬಿಜೆಪಿಯನ್ನಲ್ಲ ಎಂದು ಆರೋಪಿಸಿದ್ದಾರೆ.

ಜಾರ್ಖಂಡ್ ಮತ್ತು ಒಡಿಶಾದಲ್ಲಿ ರಾಜ್ಯಸಭಾ ಸಂಸದ ಧೀರಜ್ ಸಾಹುಗೆ ಸಂಬಂಧಿಸಿರುವ ಸಂಸ್ಥೆಗಳ ಮೇಲೆ ಇತ್ತೀಚೆಗೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ ಬಗ್ಗೆ ಅವರು ಪ್ರತಿಕ್ರಿಯಿಸಿದರು.

 

“ಅವರು (ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ) ಕೇವಲ ಕಾಂಗ್ರೆಸ್ ಅನ್ನು ಗುರಿಯಾಗಿಸಿಕೊಂಡಿದ್ದಾರೆ. ಅವರು ಬಿಜೆಪಿ ನಾಯಕರ ಮೇಲೂ ದಾಳಿ ಮಾಡಲಿ. ಆಗ ಮಾತ್ರ ಅವರ ಬಳಿ ಎಷ್ಟು (ಅಕ್ರಮ ಸಂಪತ್ತು) ಇದೆ ಎಂದು ತಿಳಿಯುತ್ತದೆ” ಎಂದು ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದರು.

Share Post