BengaluruPolitics

ಮೂರುದಿನಗಳ ರಜೆಯ ಬಳಿಕ ಮತ್ತೆ ಸಾಗಲಿರುವ ಪಂಚರತ್ನ ಯಾತ್ರೆ

ಇಂದಿನಿಂದ  ಮತ್ತೆ 18 ದಿನಗಳ ಕಾಲ ಜೆಡಿಎಸ್ ಪಂಚರತ್ನ ರಥಯಾತ್ರೆ.ಉತ್ತರ ಕರ್ನಾಟಕ ಭಾಗದಲ್ಲಿ ಸಂಚಾರ ಮಾಡುತ್ತಿರುವ ಪಂಚರತ್ನ ರಥಯಾತ್ರೆ
ಸಂಕ್ರಾಂತಿ ಹಬ್ಬದ ಪ್ರಯುಕ್ತ ಮೂರು ದಿನ ವಿರಾಮ‌ನೀಡಿ ಮತ್ತೆ ಇಂದಿನಿಂದ ಯಾತ್ರೆ ಮತ್ತೆ ಶುರುಮಾಡಿದ್ದಾರೆ.
ಇಂಡಿಯಿಂದ ಹಿರೇಕೆರೂರು ವರೆಗೆ ಒಟ್ಟು 21 ಕ್ಷೇತ್ರಗಳಲ್ಲಿ ಹೆಚ್.ಡಿ.ಕುಮಾರಸ್ವಾಮಿ ಯಾತ್ರೆ ಮಾಡಲುದ್ದಾರೆ‌.
ಇಂದಿನಿಂದ 6 ದಿನಗಳ ಕಾಲ  ಕ್ರಮವಾಗಿ ಇಂಡಿ, ಸಿಂಧಗಿ, ದೇವರಹಿಪ್ಪರಗಿ, ನಾಗಠಾಣ, ಮುದ್ದೇಬಿಹಾಳ ಹಾಗೂ ಬಸವನ ಬಾಗೇವಾಡಿ ಸೇರಿದಂತೆ ಹಲವೆಡೆ ಸಾಗಲಿರುವ ರಥಯಾತ್ರೆ.
ಜನವರಿ 23ರಂದು ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಲ್ಲಿ, ಅದೇ ಜನವರಿ 24ರಿಂದ 29ರವರೆಗೆ ರಾಯಚೂರು ಜಿಲ್ಲೆಯ ಲಿಂಗಸಗೂರು, ದೇವದುರ್ಗ, ರಾಯಚೂರು ಗ್ರಾಮಾಂತರ, ರಾಯಚೂರು, ಮಾನ್ವಿ, ಸಿಂಧನೂರು ಕ್ಷೇತ್ರಗಳಲ್ಲಿ ರಥಯಾತ್ರೆ ಸಾಗಲಿದೆ.

30ರಂದು ಕೊಪ್ಪಳ ಜಿಲ್ಲೆಯ ಕನಕಗಿರಿ, ಕುಷ್ಟಗಿಯಲ್ಲಿ ರಥಯಾತ್ರೆ ನಡೆಯಲಿದ್ದು 31ರಂದು ಬಳ್ಳಾರಿ, ವಿಜಯನಗರ ಜಿಲ್ಲೆಗಳ ಸಂಡೂರು, ಹಗರಿಬೊಮ್ಮನಹಳ್ಳಿ ಕ್ಷೇತ್ರಗಳಲ್ಲಿ ರಥಯಾತ್ರೆ ಸಾಗಲಿದೆ.
ಫೆಬ್ರವರಿ 1ರಂದು ದಾವಣಗೆರೆ ಕ್ಷೇತ್ರದ ಹರಿಹರ ಕ್ಷೇತ್ರದಲ್ಲಿ ಹಾಗೂ ಫೆಬ್ರವರಿ 2-3ರಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರು, ಹಿರೇಕೆರೂರು ಕ್ಷೇತ್ರಗಳಲ್ಲಿ ಪಂಚರತ್ನ ರಥಯಾತ್ರೆ ಸಾಗಲಿದೆ.

Share Post