BengaluruPolitics

ಮೈತ್ರಿ ಯಾರಿಗೆ ಬೇಕಿತ್ತು ಎಂದ ಜೆಡಿಎಸ್ ಅಧ್ಯಕ್ಷ ಸಿಎಂ ಇಬ್ರಾಹಿ

ಬೆಂಗಳೂರು; ಈ ಮೈತ್ರಿ ಯಾರಿಗೆ ಬೇಕಿತ್ತು..? ಜೆಡಿಎಸ್ ಗೆ ಬೇಕಿತ್ತಾ..? ಬಿಜೆಪಿಗೆ ಬೇಕಿತ್ತಾ..? ಅಂತ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಪ್ರಶ್ನೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಮತ್ತೊಮ್ಮೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

  ನಾನು ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ ಎನ್ನುತ್ತಿದ್ದಾರೆ. ಆದ್ರೆ ಅದು ತಪ್ಪು. ಎಲ್ಲಾ ಜಿಲ್ಲೆಗಳ ಮುಖಂಡರೂ ನನ್ನ ಸಂಪರ್ಕದಲ್ಲಿದ್ದಾರೆ. ಬಹುತೇಕ ಎಲ್ಲರಿಗೂ ಮೈತ್ರಿ ಬಗ್ಗೆ ಅಸಮಾಧಾನವಿದೆ ಎಂದು ಇಬ್ರಾಹಿಂ ಹೇಳಿದರು.

 

  ನಮ್ಮ ಜೆಡಿಎಸ್ ಪಕ್ಷದ ಸಿದ್ಧಾಂತವನ್ನು ಬಿಜೆಪಿ ಒಪ್ಪಿದೆಯಾ..? ಅಥವಾ ಅವರ ಸಿದ್ಧಾಂತವನ್ನೇ ಜೆಡಿಎಸ್ ಒಪ್ಪಿದೆಯಾ..?  ತಿಳಿಸಬೇಕು ಎಂದು ಇಬ್ರಾಹಿಂ ಹೇಳಿದರು.

 

Share Post