Bengaluru

ರಾಮಲಲ್ಲಾ ಶಿಲ್ಪಿ ಅರುಣ್ ಗೆ ತವರಲ್ಲಿ ಭವ್ಯ ಸ್ವಾಗತ

ಬೆಂಗಳೂರು; ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಯಾಗಿರುವ ಬಾಲರಾಮನ ವಿಗ್ರಹ ಕೆತ್ತನೆ ಮಾಡಿದ ಶಿಲ್ಪಿ ಇಂದು ತವರಿಗೆ ಆಗಮಿಸಿದ್ದಾರೆ. ಬೆಂಗಳೂರು ವಿಮಾನ‌ ನಿಲ್ದಾಣಕ್ಕೆ ಆಗಮಿಸಿದ ಅರುಣ್ ಯೋಗಿರಾಜ್ ಗೆ ಅದ್ದೂರಿ ಸ್ವಾಗತ ಸಿಕ್ಕಿದೆ.

 ಶಿಲ್ಪಿ ಅರುಣ್ ಯೋಗಿರಾಜ್ ಬೆಂಗಳೂರಿನ ಏರ್‌ಪೋರ್ಟ್‌ಗೆ ಆಗಮಿಸುತ್ತಿದ್ದಂತೆ ರಾಮಭಕ್ತರು ಭವ್ಯ ಸ್ವಾಗತ ಕೋರಿದರು. ಏರ್‌ಪೋರ್ಟ್‌ನಲ್ಲಿ ‘ಜೈ ಶ್ರೀರಾಮ್‌’ ಘೋಷಣೆಗಳು ಮೊಳಗಿದವು. ತನಗೆ ಸಿಕ್ಕಿ ಸ್ವಾಗತ, ಸನ್ಮಾನ ಕಂಡು ದೇವಶಿಲ್ಪಿ ಒಂದುಕ್ಷಣ ಭಾವುಕರಾದರು.

ಅರುಣ್‌ ಯೋಗಿರಾಜ್‌ ಬರುವ ವಿಷಯ ತಿಳಿಯುತ್ತಿದ್ದಂತೆ ಅಪಾರ ಸಂಖ್ಯೆಯಲ್ಲಿ ಜನ ಏರ್‌ಪೋರ್ಟ್‌ನಲ್ಲಿ ನೆರೆದಿದ್ದರು. ಕೇಂಪೇಗೌಡ ಏರ್ಪೋರ್ಟ್ ಟರ್ಮಿನಲ್-2 ರಲ್ಲಿ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿತ್ತು.

Share Post