BengaluruPolitics

ವಿಜಯೇಂದ್ರ, ಕುಮಾರಸ್ವಾಮಿ ನನ್ನ ಸೋಲಿಸಲು ಆಗಲ್ಲ; ಡಿ.ಕೆ.ಸುರೇಶ್

ಬೆಂಗಳೂರು; ನನ್ನನ್ನು ಸೋಲಿಸಲು ಕುಮಾರಸ್ವಾಮಿ, ವಿಜಯೇಂದ್ರರಿಂದ ಸಾಧ್ಯವಿಲ್ಲ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು,  ಬೆಂಗಳೂರು ಗ್ರಾಮಾಂತರದಲ್ಲಿ ನನ್ನ ಸೋಲು, ಗೆಲುವಿನ ಬಗ್ಗೆ ತೀರ್ಮಾನ ಮಾಡಬೇಕಾಗಿರೋದು ಕ್ಷೇತ್ರದ ಜನ ಎಂದರು.

 

ಕುಮಾರಸ್ವಾಮಿ-ವಿಜಯೇಂದ್ರ ಭೇಟಿಯಾಗಿದ್ದಾರೆ. ಜೊತೆಗೆ ವಿಜಯೇಂದ್ರ 28ಕ್ಕೆ 28 ಕ್ಷೇತ್ರ ಗೆಲ್ಲುತ್ತೇವೆ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸುರೇಶ್, ಅವರಿಬ್ಬರಿಗೂ ಒಳ್ಳೆಯದಾಗಲಿ ಎಂದಿದ್ದಾರೆ.  ನನ್ನ ಕ್ಷೇತ್ರದಲ್ಲಿ 24 ಲಕ್ಷ ಮತದಾರರಿದ್ದಾರೆ. ಅವರು ನಿರ್ಧಾರ ಮಾಡುತ್ತಾರೆ. ಇವರಿಬ್ಬರಿಂದ ನನ್ನ ಸೋಲಿಸಲು ಸಾಧ್ಯವಿಲ್ಲ ಎಂದರು.

ಬೆಂಗಳೂರು ಉತ್ತರದಲ್ಲಿ ಡಿ.ಕೆ ಸುರೇಶ್ ಸ್ಪರ್ಧೆ ಮಾಡೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದರ ಬಗ್ಗೆ ನಾನು ತೀರ್ಮಾನ ಮಾಡೋದು ಅಲ್ಲ. ನಾನು ಎಲ್ಲಿ ನಿಂತುಕೊಳ್ಳಬೇಕು ಅಂತ ತೀರ್ಮಾನ ಮಾಡೋದು ಹೈಕಮಾಂಡ್. ಹೈಕಮಾಂಡ್ ಎಲ್ಲಿ ನಿಲ್ಲು ಅಂತ ಹೇಳುತ್ತೋ ಅಲ್ಲಿ ನಿಲ್ಲುತ್ತೇನೆ. ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ದ ಎಂದರು.

Share Post