Bengaluru

ಸಿಎಂ ಸಂಧಾನ ಯಶಸ್ವಿ; ನಾಳೆ ಕರ್ನಾಟಕ ಬಂದ್‌ ಇಲ್ಲ

ಬೆಂಗಳೂರು: ಕೊನೆಗೂ ವಾಟಾಳ್‌ ನಾಗಾರಾಜ್‌ ಜೊತೆಗಿನ ಸಂಧಾನ ಯಶಸ್ವಿಯಾಗಿದೆ. ನಾಳೆ ಬಂದ್‌ ಇರುವುದಿಲ್ಲ. ಸದ್ಯಕ್ಕೆ ನಾಳೆ ಕರೆ ನೀಡಲಾಗಿದ್ದ ಬಂದ್‌ನ್ನು ವಾಪಸ್‌ ಪಡೆಯಲಾಗಿದೆ. ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರ ಜತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಡೆಸಿದ ಸಭೆ ಯಶಸ್ವಿಯಾಗಿದೆ.
ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿರುವ ವಾಟಾಳ್ ನಾಗರಾಜ್, ಎಂಇಎಸ್ ನಿಷೇಧಿಸಲು ಮುಖ್ಯಮಂತ್ರಿ ಅವರು ಸಮಯ ಕೇಳಿದ್ದಾರೆ. ಅವರ ಮೇಲೆ ಭರವಸೆ ಇಟ್ಟು ಕರ್ನಾಟಕ ಬಂದ್ ಮುಂದೂಡಿದ್ದೇವೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿಯವರು, ಶೀಘ್ರದಲ್ಲೇ ಎಂಇಎಸ್‌ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

Share Post