BengaluruScience

ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಶಾಸಕ ಶಿವರಾಂ ಹೆಬ್ಬಾರ್

ಬೆಂಗಳೂರು: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಆಪರೇಷನ್ ಹಸ್ತದ ವಿಚಾರ ಹೆಚ್ಚು ಸದ್ದು ಮಾಡುತ್ತಿದೆ. ಕೆಲ ಬಿಜೆಪಿ ನಾಯಕರು ಕಾಂಗ್ರೆಸ್ ಸೇರುತ್ತಾರೆಂಬ ವಿಚಾರ ಮುನ್ನೆಲೆಯಲ್ಲಿದೆ. ಇದಕ್ಕೆ ಸಾಕ್ಷಿ ಎಂಬಂತೆ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಸಿಎಂ ಭೇಟಿ ಮಾಡಿದ್ದಾರೆ. ಈ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.

ಇತ್ತೀಚೆಗಷ್ಟೆ ಶಾಸಕ ಎಸ್.ಟಿ.ಸೋಮಶೇಖರ್ ಸಿಎಂ ಸಿದ್ರಾಮಯ್ಯ ಭೇಟಿ ಮಾಡಿದ್ದರು. ಅನಂತರ ಅವರ ಕ್ಷೇತ್ರಕ್ಕೆ ಕೋಟಿ ಕೋಟಿ ಅನುದಾನ ನೀಡಲಾಗಿತ್ತು.

ಇದೀಗ ಶಿವರಾಂ ಹೆಬ್ಬಾರ್ ಅವರು ಸಿಎಂ ಭೇಟಿಯಾಗಿದ್ದಾರೆ. ಈ ಇಬ್ಬರು ಶಾಸಕರು ಕೂಡಾ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರುತ್ತಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಈ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.

Share Post