BengaluruPolitics

ಹತ್ತು ಶಾಸಕರ ಅಮಾನತು ವಿಚಾರ; ಬಿಜೆಪಿಯಿಂದ ಪ್ರತಿಭಟನೆ

ಬೆಂಗಳೂರು; ಡೆಪ್ಯೂಟಿ ಸ್ಪೀಕರ್‌ ಮೇಲೆ ಪೇಪರ್‌ ಎಸೆದಿದ್ದಕ್ಕೆ ಬಿಜೆಪಿ ಶಾಸಕರು ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ. ವಿಕಾಸಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಿದ ಬಿಜೆಪಿ ಶಾಸಕರು, ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಹಿಂದೆ ಕಾಂಗ್ರೆಸ್‌ನವರು ಕೂಡಾ ದುಂಡಾವರ್ತನೆ ತೋರಿದ್ದರು. ಈಗ ನಾವು ಪೇಪರ್‌ ಎಸೆದಿದ್ದೇವಷ್ಟೇ. ಅಷ್ಟೆಕ್ಕೇ ಅಮಾನತು ಮಾಡಲಾಗಿದೆ ಎಂದು ಆರೋಪಿಸಿದರು.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು. ಆರ್.ಅಶೋಕ್, ಡಾ.ಅಶ್ವತ್ಥನಾರಾಯಣ್, ವಿ.ಸುನೀಲ್ ಕುಮಾರ್, ಅರಗ ಜ್ಞಾನೇಂದ್ರ, ಅರವಿಂದ ಬೆಲ್ಲದ, ವೇದ ವ್ಯಾಸ್ ಕಾಮತ್, ಯಶ್ ಪಾಲ್ ಸುವರ್ಣ, ಧೀರಜ್ ಮುನಿರಾಜು, ಉಮಾನಾಥ್ ಕೋಟ್ಯಾನ್, ವೈ.ಭರತ್ ಶೆಟ್ಟಿ ಅವರನ್ನು ಅಮಾನತು ವಿರೋಧಿಸಿ ಈ ಪ್ರತಿಭಟನೆ ನಡೆಯಿತು. ಧರಣಿ ನಂತರ ಮೆರವಣಿಗೆ ರಾಜಭವನಕ್ಕೆ ತೆರಳಿದ ಬಿಜೆಪಿ ಶಾಸಕರು, ರಾಜ್ಯಪಾಲರಿಗೆ ದೂರು ನೀಡಿದರು.

 

Share Post