Bengaluru

ವಿದೇಶದಿಂದ ಬಂದ ೧೦ ಜನರಿಗೆ ಕೊರೋನಾ

ದೇವನಹಳ್ಳಿ : ರಾಜ್ಯದಲ್ಲಿ ಈ ತಿಂಗಳ ಅಂತ್ಯದೊಳಗೆ ಕೋವಿಡ್‌ ೩ನೇ ಅಲೆ ಅಪ್ಪಳಿಸಲಿದೆ ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಈಗಾಗಾಲೇ ನಗರದಲ್ಲಿ ಒಮಿಕ್ರಾನ್‌ ಹೆಚ್ಚಾಗುತ್ತಿದೆ. ಹೀಗಾಗಿ ಮುಂಬರುವ ಆಚರಣೆಗೆ ಸರ್ಕಾರ ಬ್ರೇಕ್‌ ಹಾಕಿದೆ. ಇದೀಗ ವಿದೇಶದಿಂದ ಬಂದ 10 ಜನರಿಗೆ ಕೋವಿಡ್​ ಸೋಂಕು ತಗುಲಿರುವುದು ದೃಢವಾಗಿದೆ. ಸೋಂಕಿತರನ್ನು ನಗರದ ಬೌರಿಂಗ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಫ್ರಾಂಕ್‌ಫರ್ಟ್‌ನಿಂದ ಆಗಮಿಸಿದ 40 ವರ್ಷದ ಪುರುಷ, 30 ವರ್ಷದ ಮಹಿಳೆ, 33 ವರ್ಷದ ಪುರುಷ, 31 ವರ್ಷದ ಪುರುಷ ಮತ್ತು 29 ವರ್ಷದ ಪುರುಷ ಪ್ರಯಾಣಿಕರಲ್ಲಿ ಸೋಂಕು ಕಾಣಿಸಿದೆ.
ಪ್ಯಾರಿಸ್‌ನಿಂದ ಆಗಮಿಸಿದ 33 ವರ್ಷದ ಪುರುಷ, 25 ವರ್ಷದ ಮಹಿಳೆ ಮತ್ತು 19 ವರ್ಷದ ಯುವಕನಲ್ಲಿ ಮತ್ತು ಕತಾರ್‌ನಿಂದ ಆಗಮಿಸಿದ 35 ವರ್ಷದ ಮಹಿಳಾ ಮತ್ತು 10 ವರ್ಷದ ಬಾಲಕಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಎಲ್ಲಾ10 ಕೋವಿಡ್ ಸೋಂಕಿತ ಪ್ರಯಾಣಿಕರನ್ನು ಬೆಂಗಳೂರು ನಗರದ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Share Post