BengaluruPolitics

ಕಾಂಗ್ರೆಸ್‌ನ 20-30 ಶಾಸಕರು ಪಕ್ಷಾಂತರಕ್ಕೆ ಸಿದ್ಧರಿದ್ದಾರೆ; ಹೆಚ್‌.ಡಿ.ಕುಮಾರಸ್ವಾಮಿ

ಬೆಂಗಳೂರು; ಲೋಕಸಭಾ ಚುನಾವಣೆಗೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್‌ ನಾಯಕರು ರಾಜ್ಯದಲ್ಲಿ ಆಪರೇಷನ್‌ ಹಸ್ತ ಶುರು ಮಾಡಿದ್ದಾರೆ. ಇದು ಎಲ್ಲರಿಗೂ ಗೊತ್ತಿರುವ ವಿಚಾರ. ಆದ್ರೆ ಮಾಜಿ ಸಿಎಂ ಕುಮಾರಸ್ವಾಮಿ ಬೇರೆಯದೇ ಬಾಂಬ್‌ ಹಾಕಿದ್ದಾರೆ. ಕಾಂಗ್ರೆಸ್‌ನಿಂದಲೇ 20 ರಿಂದ 30 ಶಾಸಕರು ಬಿಟ್ಟು ಹೋಗೋಕೆ ರೆಡಿಯಾಗಿದ್ದಾರೆ ಅಂತ ಅವರು ಹೇಳಿದ್ದಾರೆ. ಈ ಮೂಲಕ ರಾಜಕೀಯ ವಲಯದಲ್ಲಿ ಚರ್ಚೆ ಹುಟ್ಟು ಹಾಕಿದ್ದಾರೆ.

ಕಾಂಗ್ರೆಸ್‌ನವರು ಸುಮ್ಮನೆ ಆಪರೇಷನ್‌ ಹಸ್ತ ವಿಚಾರ ಹರಿಬಿಟ್ಟಿದ್ದಾರೆ. ನಿಜ ಹೇಳಬೇಕು ಅಂದ್ರೆ ಅವರದೇ ಪಕ್ಷದ 30ಕ್ಕೂ ಹೆಚ್ಚು ಶಾಸಕರು ಪಕ್ಷ ಬಿಟ್ಟು ಹೋಗಲು ಸಿದ್ಧರಾಗಿದ್ದಾರೆ. ಎರಡು ತಿಂಗಳಲ್ಲೇ ಸರ್ಕಾರ ಈ ವಾತಾವರಣ ಸೃಷ್ಟಿ ಮಾಡಿಕೊಂಡಿದೆ. ಇದನ್ನು ಮುಚ್ಚಿಕೊಳ್ಳೋದಕ್ಕಾಗಿ, ಜೆಡಿಎಸ್‌ ಹಾಗೂ ಬಿಜೆಪಿಯಿಂದ ವಲಸೆ ಬರುತ್ತಾರೆ ಎಂದು ಹೇಳಲಾಗುತ್ತಿದೆ ಎಂದು ಹೆಚ್ಡಿಕೆ ಹೇಳಿದ್ದಾರೆ.

Share Post