BengaluruPolitics

ವರುಣಾ ಕ್ಷೇತ್ರಕ್ಕೆ ಆರ್‌ಎಸ್‌ಎಸ್‌ನ 200 ಮಂದಿ ಆಗಮನ

ಮೈಸೂರು; ವರುಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೋಮಣ್ಣ ಅವರನ್ನು ಗೆಲ್ಲಿಸಲು ಬಿಜೆಪಿ ಭಾರಿ ರಣತಂತ್ರ ರೂಪಿಸುತ್ತಿದೆ. ಸಿದ್ದರಾಮಯ್ಯ ಅವರನ್ನು ಸೋಲಿಸಲೇಬೇಕು ಎಂದು ಪಣ ತೊಟ್ಟಿರುವ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ನಾಯಕರು, ಮತದಾರರನ್ನು ಸೆಳೆಯಲು ನಾನಾ ತಂತ್ರಗಾರಿಕೆ ಮಾಡುತ್ತಿದ್ದಾರೆ. ಅದರ ಭಾಗವಾಗಿ ಸುಮಾರು 200 ಮಂದಿಯ ತಂಡ ಉತ್ತರ ಪ್ರದೇಶ ಹಾಗೂ ಬಿಹಾರದಿಂದ ವರುಣಾಕ್ಕೆ ಬಂದಿದೆ.

ಪ್ರತಿ ಗ್ರಾಮ ಪಂಚಾಯತ್‌ ಗೆ ಐದು ಮಂದಿಯಂತೆ ವಿಂಗಡಣೆ ಮಾಡಲಾಗಿದ್ದು, ಅಲ್ಲಿ ಮತದಾರರನ್ನು ಬಿಜೆಪಿಯತ್ತ ಸೆಳೆಯೋ ಪ್ರಯತ್ನ ಮಾಡಲಾಗುತ್ತಿದೆ. ಆರ್‌ಎಸ್‌ಎಸ್‌ನ ೨೦೦ ಮಂದಿ ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Share Post