Bengaluru

2023ರ ವಿಧಾನಸಭಾ ಚುನಾವಣೆಗೆ ಸಜ್ಜು; ಕಾಂಗ್ರೆಸ್‌ ಸತತ ಸಭೆ

ಬೆಂಗಳೂರು; 2023ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಸಜ್ಜಾಗುತ್ತಿದೆ. ಕಳೆದ ಎರಡು ಮೂರು ದಿನಗಳಿಂದ ಕಾಂಗ್ರೆಸ್‌ ನಾಯಕರು ನಿರಂತರ ಸಭೆಗಳನ್ನು ನಡೆಸುತ್ತಿದ್ದಾರೆ. ಜಿಲ್ಲಾವಾರು ನಾಯಕರನ್ನು ಕರೆಸಿಕೊಂಡು ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಚರ್ಚೆ ನಡೆಸಲಾಗುತ್ತಿದೆ.
   ತುಮಕೂರು, ಬಳ್ಳಾರಿ ಸೇರಿ ಹಲವು ಜಿಲ್ಲೆಗಳ ನಾಯಕರೊಂದಿಗೆ ಚರ್ಚೆ ನಡೆಸಲಾಯಿತು. ಅಭ್ಯರ್ಥಿಗಳ ಆಯ್ಕೆ, ಪಕ್ಷ ಸಂಘಟನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಂದೀಪ್‌ ಸರ್ಜೇವಾಲಾ ಸೇರಿದಂತೆ ಹಲವು ನಾಯಕರು ಹಾಜರಿದ್ದರು.
Share Post