BengaluruCrime

1 ಕೆಜಿ ಚಿನ್ನ, 22 ಲಕ್ಷ ರೂ. ನಗದು ಬಿಟ್ಟು ವ್ಯಕ್ತಿ ಪರಾರಿ

ಬೆಂಗಳೂರು; ಒಂದು ಕೆಜಿ ಚಿನ್ನ ಹಾಗೂ 22 ಲಕ್ಷ ರೂಪಾಯಿ ನಗದು ಇದ್ದ ಬ್ಯಾಗ್‌ನ್ನು ವ್ಯಕ್ತಿಯೊಬ್ಬ ಪೊಲೀಸರ ಬಿಟ್ಟು ಪರಾರಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಭಾನಯವಾರ ತಡರಾತ್ರಿ ಎಸ್‌ಪಿ ರಸ್ತೆಯಲ್ಲಿ ಹೊಯ್ಸಳ ಸಿಬ್ಬಂದಿ ಪರಿಶೀಲನೆ ಮಾಡುವ ವೇಳೆ ಈ ಘಟನೆ ನಡೆದಿದೆ.

ಹೊಯ್ಸಳ ಸಿಬ್ಬಂದಿ ರಾತ್ರಿ ಗಸ್ತಿನಲ್ಲಿದ್ದಾಗ ವ್ಯಕ್ತಿಯೊಬ್ಬ ಬ್ಯಾಗ್‌ ಹಿಡಿದುಕೊಂಡು ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ. ಇದನ್ನು ಗಮನಿಸಿದ ಪೊಲೀಸರು, ಆತನನ್ನು ಹಿಂಬಾಲಿಸಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಆತ ತನ್ನ ಹೆಸರು ವಿನೋದ್‌ ಎಂದು ಹೇಳಿಕೊಂಡಿದ್ದಾನೆ. ಬ್ಯಾಗ್‌ ಪರಿಶೀಲನೆ ಮಾಡಿದಾಗ ಅದ್ರಲ್ಲಿ 22 ಲಕ್ಷ ರೂಪಾಯಿ ನಗದು ಹಾಗೂ ಒಂದು ಕೆಜಿ ಚಿನ್ನಾಭರಣ ಸಿಕ್ಕಿದೆ. ಎಲ್ಲಿಂದ ತಂದೆ ಎಂದು ಕೇಳಿದರೆ ಚನ್ನೈನಿಂದ ಎಂದು ಹೇಳಿದ್ದಾನೆ. ಆದ್ರೆ ಯಾರು ಕೊಟ್ಟಿದ್ದು ಎಂದು ಪ್ರಶ್ನೆ ಮಾಡುತ್ತಿದ್ದಂತೆ ಬ್ಯಾಗ್‌ ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಹವಾಲಾ ಮೂಲಕ ಅದನ್ನು ತಂದಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share Post