Bengaluru

ಬಿಜೆಪಿ ಸರ್ಕಾರಕ್ಕೆ 3 ವರ್ಷ; ರಾಜ್ಯದ ಸಮಗ್ರ ಅಭಿವೃದ್ಧಿಗೆ ಒತ್ತು – ಸಿಎಂ ಬೊಮ್ಮಾಯಿ

ಬೆಂಗಳೂರು; ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇಂದಿಗೆ ಮೂರು ವರ್ಷ ಪೂರೈಸಿದೆ. ನಾವು ರಾಜ್ಯದ ಸಮಗ್ರ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಅವರು, ಇಂದು ಜನೋತ್ಸವ ನಡೆಸಲು ಉದ್ದೇಶಿಸಲಾಗಿತ್ತು. ಆದ್ರೆ ಪ್ರವೀಣ್‌ ಹತ್ಯೆ ಹಿನ್ನೆಲೆಯಲ್ಲಿ ಅದನ್ನು ರದ್ದು ಮಾಡಿದ್ದೇವೆ ಎಂದು ಹೇಳಿದರು.

ಬಿ.ಎಸ್‌.ಯಡಿಯೂರಪ್ಪ ಅವರು ಕೊವಿಡ್‌ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿದ್ದರು. ಅನಂತರ ನಾನು ಅಧಿಕಾರ ವಹಿಸಿಕೊಂಡೆ. ನಾನು ಅಧಿಕಾರಕ್ಕೇರಿ ಒಂದು ವರ್ಷವಾಗಿದೆ. ಈ ಒಂದು ವರ್ಷದಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರೈತರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಜಾರಿ ಮಾಡಿದ್ದೇವೆ. ದೇಶದಲ್ಲಿ ಮೊದಲ ಬಾರಿಗೆ ಇಂತಹ ಯೋಜನೆ ಜಾರಿಗೆ ತರಲಾಗಿದೆ. ೯.೯೮ ಲಕ್ಷ ವಿದ್ಯಾರ್ಥಿಗಳಿಗೆ ಈ ಯೋಜನೆ ತಲುಪಿದೆ. ಇನ್ನು ಎಸ್‌ಸಿ, ಎಸ್‌ಟಿ ಸಮುದಾಯದವರಿಗೆ ಹಲವು ಹೊಸ ಯೋಜನೆಗಳನ್ನು ಪರಿಚಯಿಸಲಾಗಿದೆ. ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ ಶಿಪ್‌ ಹಣವನ್ನು ಹೆಚ್ಚಿಸಲಾಗಿದೆ. ಐವತ್ತು ಒಬಿಸಿ ಹಾಸ್ಟೆಲ್‌ಗಳನ್ನು ನಿರ್ಮಿಸಲಾಗಿದೆ ಎಂದು ಸಿಎಂ ಹೇಳಿದ್ದಾರೆ.

Share Post