BengaluruCrime

ಮೆಟ್ರೋ ಕಾಮಗಾರಿಗೆ ಇದುವರೆಗೆ 38 ಬಲಿ; ಸಿಎಂ ಬೊಮ್ಮಾಯಿ ಮಾಹಿತಿ

ಬೆಂಗಳೂರು; ಮೆಟ್ರೋ ಕಾಮಗಾರಿಗೆ ಇದುವರೆಗೆ 38 ಮಂದಿ ಬಲಿಯಾಗಿದ್ದಾರಂತೆ. ಈ ಮಾಹಿತಿ ನೀಡಿದ್ದು ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ. ವಿಧಾನಪರಿಷತ್‌ ನಲ್ಲಿ ಮಾತನಾಡಿದ ಅವರು ಮೆಟ್ರೋ ಕಾಮಗಾರಿಗೆ ಇದುವರೆಗೂ 50 ಜನ ಅಪಘಾತಕ್ಕೊಳಗಾಗಿದ್ದಾರೆ. ಅದರಲ್ಲಿ 38 ಜನರು ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.

ವಿಧಾನಪರಿಷತ್ ಸದಸ್ಯರೊಬ್ಬರು ಈ ಬಗ್ಗೆ ಪ್ರಶ್ನೆ ಕೇಳಿದ್ದರು. ಇದಕ್ಕೆ ಉತ್ತರಿಸಿದ ಸಿಎಂ, ಇದುವರೆಗೂ ಆದ ಸಾವುನೋವುಗಳ ಬಗ್ಗೆ ಮಾಹಿತಿ ನೀಡಿದರು. ಜೊತೆಗೆ ಅವರಿಗೆ ನೀಡಿದ ಪರಿಹಾರದ ಬಗ್ಗೆಯೂ ತಿಳಿಸಿದರು. ಮೃತಪಟ್ಟವರ ಕುಟುಂಬಗಳಿಗೆ 3.15 ಕೋಟಿ ರೂ.ಗಳನ್ನು ಪರಿಹಾರವಾಗಿ ನೀಡಲಾಗಿದೆ ಎಂದು ತಿಳಿಸಿದ ಸಿಎಂ, ಅವಘಡಕ್ಕೆ ಕಾರಣರಾದ ಮೂರು ಎಂಜಿನಿಯರ್‌ಗಳನ್ನು ಅಮಾನತು ಮಾಡಲಾಗಿದೆ ಎಂದರು.

Share Post