BengaluruPolitics

ಬಿಜೆಪಿ ಸರ್ಕಾರದಲ್ಲಿ 3ನೇ ಸಿಎಂ ವಿಚಾರ; ಟ್ವೀಟ್‌ ಬಗ್ಗೆ ಗೊತ್ತಿಲ್ಲ ಎಂದ ಸಿದ್ದರಾಮಯ್ಯ

ಬೆಂಗಳೂರು; ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಅಮಿತ್‌ ಶಾ ಬಂದು ಹೋದ ನಂತರ ಬಿಜೆಪಿ ಮೋಡ ಕವಿದ ವಾತಾವರಣ ಇದೆ. ಬಿಜೆಪಿ ಸರ್ಕಾರದಲ್ಲಿ 3ನೇ ಸಿಎಂ ಬರುವ ಸಾಧ್ಯತೆ ಎಂದು ಕೆಪಿಸಿಸಿ ಅಧಿಕೃತ ಖಾತೆಯಿಂದ ಟ್ವೀಟ್‌ ಮಾಡಲಾಗಿತ್ತು. ಈ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದರು.

ಬೊಮ್ಮಾಯಿ ಬದಲಾವಣೆ ಬಗ್ಗೆ ನನಗೆ ಸದ್ಯಕ್ಕೆ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದ ಸಿದ್ದರಾಮಯ್ಯ ಅವರನ್ನು ಮಾಧ್ಯಮ ಪ್ರತಿನಿಧಿಗಳು ನಿಮ್ಮ ಪಕ್ಷದ ಟ್ವಿಟರ್‌ ಖಾತೆಯಲ್ಲೇ ಹಾಗೆ ಹಾಕಲಾಗಿದೆ ಎಂದು ಕೇಳಿದರು. ಆಗ ಸಿದ್ದರಾಮಯ್ಯ ಅವರು ಯಾರು ಟ್ವೀಟ್‌ ಮಾಡಿದ್ದಾರೋ ಅವರನ್ನೇ ಕೇಳಿಕೊಳ್ಳಿ ಎಂದು ಉತ್ತರಿಸಿದರು. ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕೂಡಾ ಈ ಬಗ್ಗೆ ಸರಿಯಾಗಿ ಉತ್ತರಿಸಿಲ್ಲ. ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿದ್ದೇವೆ. ಆಗಸ್ಟ್‌ ೧೫ ಮಗಿಯಲಿ ಎಲ್ಲವನ್ನೂ ಮಾತನಾಡೋಣ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

Share Post