Bengaluru

ಕೋವಿಡ್‌ ಮೃತರಿಗೆ 446 ಕೋಟಿ ರೂಪಾಯಿ ಪರಿಹಾರ; ಆರ್‌.ಅಶೋಕ್‌

ಬೆಂಗಳೂರು; ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಗಳಿಗೆ ನೈಜತೆಯ ಆಧಾರದ ಮೇಲೆ ಪರಿಹಾರ ನೀಡಲಾಗಿದೆ. ಇದುವರೆಗೆ 446 ಕೋಟಿ ರೂಪಾಯಿ ಪರಿಹಾರ ಹಣವನ್ನು ವಿತರಣೆ ಮಾಡಲಾಗಿದೆ ಅಂತ ಸಚಿವ ಆರ್‌.ಅಶೋಕ್‌ ತಿಳಿಸಿದ್ದಾರೆ. ಪರಿಷತ್‌ ನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.

ರಾಜ್ಯ ಸರ್ಕಾರದಿಂದ ತಲಾ ಒಂದು ಲಕ್ಷ ರೂಪಾಯಿ ಪರಿಹಾರ ನೀಡಿದೆ. ಕೇಂದ್ರ ಸರ್ಕಾರದಿಂದ ತಲಾ ಐವತ್ತು ಸಾವಿರ ರೂಪಾಯಿ ನೀಡಲಾಗಿದೆ ಎಂದು ಸಚಿವರು ಉತ್ತರಿಸಿದರು. ಕೋವಿಡ್‌ನಿಂದ ಮೃತ ಎಂದು ಹೆಲ್ತ್ ಬುಲೆಟಿನ್‌ನಲ್ಲಿಯೇ ಬಂದಿದ್ದರೆ, ಆ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ ಎಂದು ಕಾಂಗ್ರೆಸ್‌ ಸದಸ್ಯರ ಪ್ರಶ್ನೆಗೆ ಸ್ಪಷ್ಟನೆ ಕೊಟ್ಟರು.

 

 

Share Post