BengaluruCrime

ಶಾಲಾ ಮಕ್ಕಳಿಂದ ಶೌಚಾಲಯ ತೊಳೆಸಿದ ಪ್ರಕರಣ; ಮುಖ್ಯಶಿಕ್ಷಕಿ ಅರೆಸ್ಟ್‌

ಬೆಂಗಳೂರು; ಪೀಣ್ಯ ಸಮೀಪದ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಫೋಟೋಗಳು ವೈರಲ್‌ ಆಗಿದ್ದವು. ಇದಾದ ಮೇಲೆ ಶಾಲೆಯ ಮುಖ್ಯಶಿಕ್ಷಕಿಯನ್ನು ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಮುಖ್ಯಶಿಕ್ಷಕಿ ಲಕ್ಷ್ಮೀದೇವಮ್ಮ ಅವರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಿಇಒ ಆಂಜನಪ್ಪ ನೀಡಿದ ದೂರಿನ ಅನ್ವರ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡು ಕ್ರಮ ಜರುಗಿಸಿದ್ದಾರೆ.

ಇಂದು ಲಕ್ಷ್ಮೀದೇವಮ್ಮ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಮಕ್ಕಳ ಕೈಯಿಂದ ಶೌಚಾಲಯ ತೊಳೆಸಿದ ಹಿನ್ನೆಲೆಯಲ್ಲಿ ಶಾಲಾ ಮುಖ್ಯಶಿಕ್ಷಕಿ ಲಕ್ಷ್ಮೀದೇವಮ್ಮ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಮಕ್ಕಳ ಪೋಷಕರು ಕೂಡಾ ಪ್ರತಿಭಟನೆ ನಡೆಸಿದ್ದರು. ಟಾಯ್ಲೆಟ್‌ ಕ್ಲೀನ್‌ ಮಾಡದಿದ್ದರೆ ಲಕ್ಷ್ಮೀದೇವಮ್ಮ ಅವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ ಎಂದೂ ಆರೋಪಿಸಲಾಗಿತ್ತು.

ಫೋಟೋಗಳು, ವಿಡಿಯೋಗಳು ವೈರಲ್‌ ಆದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಈ ಕ್ರಮ ಕೈಗೊಂಡಿದೆ.

 

Share Post