BengaluruCrime

ಆಂಬುಲೆನ್ಸ್‌ಗೆ ಡಿಕ್ಕಿ ಹೊಡೆದ ಲಾರಿ; ರೋಗಿ ಸ್ಥಳದಲ್ಲೇ ಸಾವು!

ಬೆಂಗಳೂರು; ಆಂಬುಲೆನ್ಸ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ರೋಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ನೆಲಮಂಗಲದ ಬೊಮ್ಮನಹಳ್ಳಿ ಬಳಿ ಈ ದುರ್ಘಟನೆ ನಡೆದಿದೆ.

ರೋಗಿಯನ್ನು ಚಿತ್ರದುರ್ಗದ ಆಸ್ಪತ್ರೆಯಿಂದ ಆಂಬುಲೆನ್ಸ್‌ನಲ್ಲಿ ಬೆಂಗಳೂರಿಗೆ ಕರೆತರಲಾಗುತ್ತಿತ್ತು. ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಬರುತ್ತಿದ್ದಾಗ ವೇಗವಾಗಿ ಬಂದ ಕಂಟೇನರ್‌ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಆಂಬುಲೆನ್ಸ್‌ನಲ್ಲಿದ್ದ ಕ್ಯಾನ್ಸರ್‌ ರೋಗಿ ವಿಜಯ್‌ ಕುಮಾರ್‌ ತಲೆಗೆ ತೀವ್ರ ಪೆಟ್ಟಾಗಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ/

ಘಟನೆಯಲ್ಲಿ ಆಂಬುಲೆನ್ಸ್‌ ಚಾಲಕ ಸೇರಿ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

 

Share Post