BengaluruCinemaCrime

ಮಹಿಳೆಗೆ ಸಾಕು ನಾಯಿ ಕಚ್ಚಿದ ಪ್ರಕರಣ; ಪೊಲೀಸ್‌ ಠಾಣೆಗೆ ನಟ ದರ್ಶನ್‌ ಹಾಜರು

ಬೆಂಗಳೂರು; ಇತ್ತೀಚೆಗೆ ಮಹಿಳೆಯೊಬ್ಬರಿಗೆ ನಟ ದರ್ಶನ್‌ ಸಾಕಿರುವ ನಾಯಿಯೊಂದು ಕಚ್ಚಿತ್ತು. ಈ ಹಿನ್ನೆಲೆಯಲ್ಲಿ ಆ ಮಹಿಳೆ ಆರ್‌ಆರ್‌ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಆರ್‌ಆರ್‌ ನಗರ ಪೊಲೀಸರು ನೋಟಿಸ್‌ ನೀಡಿದ್ದರು. ಅದರಂತೆ ಇಂದು ದರ್ಶನ್‌ ಅವರು ಇಂದು ಪೊಲೀಸ್‌ ಠಾಣೆಗೆ ಭೇಟಿ ನೀಡಿ ತಮ್ಮ ಹೇಳಿಕೆ ದಾಖಲಿಸಿದ್ದಾರೆ.

ಅಂದಹಾಗೆ, ಕೆಲ ದಿನಗಳ ಹಿಂದೆ ಮಹಿಳೆಯೊಬ್ಬರು ದರ್ಶನ್‌ ಮನೆ ಮುಂದೆ ನಡೆದುಕೊಂಡು ಹೋಗುತ್ತಿದ್ದಾಗ ದರ್ಶನ್‌ ಅವರ ಮನೆಯ ಸಾಕು ನಾಯಿ ಕಚ್ಚಿತ್ತು. ಈ ಸಂಬಂಧ ಮಹಿಳೆ ಪ್ರಕರಣ ದಾಖಲಿಸಿದ್ದರು. ಆದರೂ ಪೊಲೀಸರು ದರ್ಶನ್‌ಗೆ ನೋಟಿಸ್‌ ನೀಡಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಅನಂತರ ಎಚ್ಚೆತ್ತುಕೊಂಡು ಪೊಲೀಸರು ದರ್ಶನ್‌ಗೆ ನೋಟಿಸ್‌ ಜಾರಿ ಮಾಡಿದ್ದರು.

 

Share Post