BengaluruCrime

ಸಿಎಂ ಸಿದ್ದರಾಮಯ್ಯ ಇದ್ದ ವೇದಿಕೆಗೆ ನುಗ್ಗಿದ ಯುವಕ!; ಮುಂದೇನಾಯ್ತು..?

ಬೆಂಗಳೂರು; ವಿಧಾನಸೌಧದ ಮುಂದೆ ಏರ್ಪಡಿಸಿದ್ದ ವೇದಿಕೆ ಕಾರ್ಯಕ್ರಮದ ವೇಳೆ ಸಿಎಂ ಸಿದ್ದರಾಮಯ್ಯ ಇದ್ದ ವೇದಿಕೆಗೆ ಯುವಕನೊಬ್ಬ ನುಗ್ಗಿದ್ದಾರೆ.. ವೇದಿಕೆಗೆ ಇದ್ದಕ್ಕಿದ್ದಂತೆ ಯುವಕ ನುಗ್ಗಿದ್ದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.. ಯುವಕ ವೇದಿಕೆ ಮೇಲೆ ಏರುತ್ತಿದ್ದಂತೆ ಭದ್ರತಾ ಸಿಬ್ಬಂದಿ ಆತನನ್ನು ಹಿಡಿದು, ವೇದಿಕೆಯಿಂದ ಕೆಳಗಿಳಿಸಿದ್ದಾರೆ.
ಭದ್ರತಾಲೋಪದಿಂದಲೇ ಈ ಘಟನೆ ನಡೆದಿದೆ.. ವಿಧಾನಸೌಧದ ಮುಂಭಾಗ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.. ಈ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.. ಸಿಎಂ ವೇದಿಕೆ ಮೇಲಿ ಕುಳಿತಿದ್ದಾಗ ಯುವಕನೋರ್ವ ವೇದಿಕೆ ಮೇಲೇರಿದ್ದಾನೆ.. ಕೈಯಲ್ಲಿದ್ದ ಶಾಲುವನ್ನು ಸಿಎಂ ಸಿದ್ದರಾಮಯ್ಯ ಅವರತ್ತ ಎಸೆದಿದ್ದಾನೆ.
ಕೂಡಲೇ ಎಚ್ಚೆತ್ತುಕೊಂಡು ಭದ್ರತಾ ಸಿಬ್ಬಂದಿ ಆತನನ್ನು ಹಿಡಿಯಲು ಹರಸಾಹಸಪಟ್ಟಿದೆ.. ಕೊನೆಗೆ ಆತನನ್ನು ಉರುಳಾಡಿಸಿ ಹಿಡಿದಿದೆ.. ನಂತರ ಆತನನ್ನು ಪೊಲೀಸರಿಗೆ ಒಪ್ಪಿಸಲಾಯಿತು.. ಪೊಲೀಸರು ಆತನನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ..

Share Post