BengaluruCrime

ಬೆಂಜ್‌ ಕಾರು ಚಾಲಕನ ಅವಾಂತರ; ಸರಣಿ ಅಪಘಾತಕ್ಕೆ ಓರ್ವ ಬಲಿ

ಬೆಂಗಳೂರು: ಬೆಂಜ್‌ ಕಾರು ಚಾಲಕನ ಅವಾಂತರದಿಂದಾಗಿ ವ್ಯಕ್ತಿಯೊಬ್ಬ ಪ್ರಾಣ ಕಳೆದುಕೊಂಡಿದ್ದಾರೆ. ಬೆಂಜ್‌ ಅತಿವೇಗದಿಂದ ಓಡಿಸಿದ ಕಾರಣದಿಂದಾಗಿ ಸರಣಿ ಅಪಘಾತ ನಡೆದಿದೆ. ಹಲಸೂರು ಸಂಚಾರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

ಬೆಂಜ್‌ ಕಾರು ಒಂದು ಆಟೋ ಹಾಗೂ 1 ಟಾಟಾ ಏಸ್‌ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅದರ ರಭಸಕ್ಕೆ ಆಟೋ ಹಾಗೂ ಟಾಟಾ ಏಸ್‌ ವಾಹನ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಮತ್ತೊಬ್ಬ ವ್ಯಕ್ತಿಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಂಟು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಅಪಘಾತ ಮಾಡಿದ ಕಾರು ನಂದಿತಾ ಚೌಧರಿ ಎಂಬುವವರಿಗೆ ಸೇರಿದ್ದು ಎಂದು ಗೊತ್ತಾಗಿದೆ. ಹಲಸೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪರಿಶೀಲನೆ ನಡೆಸಿದ್ದಾರೆ.

Share Post