Bengaluru

ಭೀಕರ ಅಪಘಾತದಲ್ಲಿ ಬೆಂಗಳೂರಿನ ಹಿರಿಯ ಪತ್ರಕರ್ತ ಕೊನೆಯುಸಿರು

ಬೆಂಗಳೂರು: ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ದುರಂತದಲ್ಲಿ ದಿನಪತ್ರಿಕೆಯೊಂದರಲ್ಲಿ ಹಿರಿಯ ಪತ್ರಕರ್ತ ಗಂಗಾಧರ ಮೂರ್ತಿ ಎಂಬುವವರು ಸಾವಿಗೀಡಾಗಿದ್ದಾರೆ. ಟೌನ್‌ಹಾಲ್‌ ಬಳಿ ಟ್ರಕ್‌ ಒಂದು ಡಿಕ್ಕಿ ಹೊಡೆದಿದ್ದರಿಂದ ಈ ದುರ್ಘಟನೆ ನಡೆದಿದೆ.

ಗಂಗಾಧರ ಮೂರ್ತಿಯವರು ಬೈಕ್‌ನಲ್ಲಿ ಚಾಮರಾಜಪೇಟೆಯಲ್ಲಿರುವ ತಮ್ಮ ಕಚೇರಿಗೆ ಬರುತ್ತಿದ್ದರು. ಈ ವೇಳೆ ಟೌನ್‌ ಟ್ರಕ್‌ ಒಂದು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿದೆ. ನಂತರ ಅದು ಗಂಗಾಧರ ಮೂರ್ತಿ ಇದ್ದ ಬೈಕ್‌ ಮೇಲೆ ಉರುಳಿಬಿದ್ದಿದೆ. ಟ್ರಕ್‌ನಡಿ ಸಿಲುಕಿದ್ದ ಗಂಗಾಧರ ಮೂರ್ತಿಯವರು ತೀವ್ರವಾಗಿ ಗಾಯಗೊಂಡಿದ್ದರು. ರಕ್ತ ರಸ್ತೆಯಲ್ಲೆಲ್ಲಾ ಚೆಲ್ಲಿತ್ತು. ಅವರನ್ನು ತಕ್ಷಣ ವಿಕ್ಟೋರಿಯಾ ಆಸ್ಪತ್ರೆಗೆ ತೆಗೆದುಕೊಂಡು ಚಿಕಿತ್ಸೆ ಕೊಡಿಸಲಾಯಿತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Share Post