BengaluruHealth

ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ 50 ಲಕ್ಷ ರೂ. ವಿಮಾ ಯೋಜನೆ ಜಾರಿ

ಬೆಂಗಳೂರು;  ಕೆಎಸ್‌ಆರ್‌ಟಿಸಿ ನೌಕರರು ಹಲವು ಸೌಲಭ್ಯಗಳಿಗಾಗಿ ಹೋರಾಟ ನಡೆಸುತ್ತಲೇ ಬಂದಿದ್ದರು. ಇದೀಗ ಅವರಿಗೆ ಕೆಎಸ್‌ಆರ್‌ಟಿಸಿ ಗುಡ್‌ ನ್ಯೂಸ್‌ ನೀಡಿದೆ. ತನ್ನ ನೌಕರರಿಗೆ 50 ಲಕ್ಷ ರೂಪಾಯಿ ಅಪಘಾತ ವಿಮಾ ಯೋಜನೆಯನ್ನು ಜಾರಿ ಮಾಡಿದೆ.

ಕೆಎಸ್‌ಆರ್‌ಟಿ ಸಿಬ್ಬಂದಿ ಅಪಘಾತದಲ್ಲಿ ಪ್ರಾಣ ಕಳೆದುಕೊಂಡರೆ, ಅಥವಾ ಅಂಗಾಂಗ ಊನವಾದರೆ ದೊಡ್ಡ ಮೊತ್ತದ ಪರಿಹಾರ ಸಿಗುತ್ತಿರಲಿಲ್ಲ. ಹೀಗಾಗಿ ನೌಕರರಿಗೆ ದೊಡ್ಡ ಮೊತ್ತದ ಅಪಘಾತ ವಿಮಾ ಯೋಜನೆಯನ್ನು ನಿಗಮ ಜಾರಿ ಮಾಡಿದೆ. ಇದಕ್ಕಾಗಿ ಎಸ್‌ಬಿಐ ಜೊತೆ ಒಡಂಬಡಿಕೆ ಮಾಡಿಕೊಂಡಿದೆ.

ಅಧ್ಯಕ್ಷ ಎಂ.ಚಂದ್ರಪ್ಪ ಅವರ ಸಮ್ಮುಖದಲ್ಲಿ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಹಾಗೂ ಎಸ್‌ಬಿಐನ ಡಿಜಿಎಂ ಪಂಕಜ್ ತಪ್ಲಿಯಾಲ್ ಅವರು ಈ ಒಡಂಬಡಿಕೆ ಸಹಿ ಹಾಕಿದ್ದಾರೆ.

Share Post