Bengaluru

ರಾಜ್ಯಸಭಾ ಸದಸ್ಯ ಜಗ್ಗೇಶ್‌ ಮನೆ ಜಲಾವೃತ; ಅಧಿಕಾರಿಗಳಿಗೆ ಮನವಿ

ಬೆಂಗಳೂರು; ಬಿಜೆಪಿಯ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್‌ ಅವರ ಮನೆಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಜಗ್ಗೇಶ್‌ ಅವರು ತುಮಕೂರು ಜಿಲ್ಲೆಯ ಮಾಯಸಂದ್ರದವರು. ಇಲ್ಲಿರುವ ಅವರ ಮನೆಗೆ ನೀರು ನುಗ್ಗಿದ್ದು ಅವಾಂತರ ಸೃಷ್ಟಿಯಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

‘ಮಾಯಸಂದ್ರದ ನನ್ನ ಮನೆ ಸಂಪೂರ್ಣ ಜಲಾವೃತ.. ಬಹುತೇಕರು ನೀರು ಹರಿವ ಸರ್ಕಾರದ ಜಾಗದಲ್ಲಿ ಮನೆ ಕಟ್ಟಿ ನೀರು ಹರಿಯುವ ಹೊಂಡಗಳ ಮುಚ್ಚಿದ್ದಾರೆ. ಮಾಯಸಂದ್ರ ತಳದಲ್ಲಿ ಇರುವ ಸುಮಾರು 20 ಆಸ್ತಿಗಳಿಗೆ ನಿರಂತರ ನೀರು ನುಗ್ಗುತ್ತದೆ. ದಯಮಾಡಿ ನೀರಾವರಿ ನಿಗಮ ಗಮನ ಹರಿಸಲು ವಿನಂತಿ..’ ಎಂದು ಮನವಿ ಮಾಡಿಕೊಂಡಿದ್ದಾರೆ.

 

Share Post