BengaluruCinema

ರವೀಂದ್ರ ಕಲಾಕ್ಷೇತ್ರದಲ್ಲಿ ಶಿವರಾಂ ಅಂತಿಮ ದರ್ಶನ; 11 ಗಂಟೆ ನಂತರ ಅಂತ್ಯಕ್ರಿಯೆ

ಬೆಂಗಳೂರು: ಹಿರಿಯ ನಟ ಶಿವರಾಂ ಅವರ ಪಾರ್ಥೀವ ಶರೀರರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದೆ. ಅಭಿಮಾನಿಗಳು, ಸಿನಿಪ್ರೇಮಿಗಳು, ಗಣ್ಯರು, ಚಿತ್ರರಂಗ ಕಲಾವಿದರು ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ಬೆಳಗ್ಗೆ 10.30ರ ನಂತರ ತ್ಯಾಗರಾಜನಗರದ ನಿವಾಸಕ್ಕೆ ಪಾರ್ಥಿವ ಶರೀರವನ್ನು ಸ್ಥಳಾಂತರಿಸಲಾಗುತ್ತದೆ. ಅಲ್ಲಿ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. 11 ಗಂಟೆ ನಂತರ ಕುಟುಂಬಸ್ಥರು, ಬಂಧುಗಳ ಸಮ್ಮುಖದಲ್ಲಿ ಬನಶಂಕರಿಯ ಚಿತಾಗಾರದಲ್ಲಿ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುತ್ತದೆ.

     ಕೆಲ ದಿನಗಳ ಹಿಂದೆ ಮನೆಯಲ್ಲಿ ಪೂಜೆಗೆ ಸಿದ್ಧರಾಗುತ್ತಿದ್ದ ವೇಳೆ ನಟ ಶಿವರಾಂ ಎಡವಿ ಬಿದ್ದಿದ್ದರು. ಇದರಿಂದಾಗಿ ತಲೆಗೆ ಪೆಟ್ಟಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಕೋಮಾ ಸ್ಥಿತಿಗೆ ಜಾರಿದ ನಂತರ ಚೇತರಿಕೆ ಕಾಣಲೇ ಇಲ್ಲ. ಅದಕ್ಕೂ ಕೆಲ ದಿನಗಳ ಹಿಂದೆ ಅವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಪಘಾತವಾಗಿತ್ತು.

Share Post