BengaluruCinema

ಹೊಲದಲ್ಲಿ ನೇಗಿಲು ಹಿಡಿದ ನಟಿ ಶೃತಿ

ಬೆಂಗಳೂರು; ಮುಂಗಾರು ಶುರುವಾಗುವುದಕ್ಕಿಂತ ಮೊದಲೇ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಹುತೇಕ ಕಡೆ ಈಗಾಗಲೇ ಬಿತ್ತನೆ ಕಾರ್ಯ ಚುರುಕುಗೊಂಡಿದೆ. ಇತ್ತ ನಟಿ ಶೃತಿ ಕೂಡಾ ತಮ್ಮ ತವರಿನ ಹೊಲದಲ್ಲಿ ಬಿತ್ತನೆ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ. ತಮ್ಮ ಮಗಳು ಹಾಗೂ ತಮ್ಮ ಇಬ್ಬರು ತಾಯಿಯರೊಂದಿಗೆ ನಟಿ ಶೃತಿ ಬಿತ್ತನೆ ಮಾಡಿದ್ದಾರೆ. ನೇಗಿಲು ಹಿಡಿದು ಉಳುಮೆ ಕೂಡಾ ಮಾಡಿದ್ದಾರೆ.

 

ನಾನೇ ಉತ್ತಿ ಬಿತ್ತಿ ಬೆಳೆಯಬೇಕೆಂಬುದು ನನ್ನ ಬಹುವರ್ಷದ ಆಸೆ. ಭಗವಂತನಿಗೆ ಕೋಟಿ ನಮನಗಳು ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ನಟಿ ಶ್ರುತಿ ವಿಡಿಯೋ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 

 

Share Post